8:50 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬಂಟ್ವಾಳ: ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ

30/09/2023, 10:39

ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ವಕೀಲರ ಸಂಘ, ಬಂಟ್ವಾಳ ಪೋಲಿಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ಜರುಗಿತು.


ವೇದಿಕೆಯಲ್ಲಿ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಯಾದ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು), ಅನಂತ ಪದ್ಮನಾಭ, (ಆರಕ್ಷಕ ನಿರೀಕ್ಷಕರು ಬಂಟ್ವಾಳ ನಗರ ಪೊಲೀಸ್ ಠಾಣೆ), ರಾಮಕೃಷ್ಣ (ಪಿ ಎಸ್ ಐ ಬಂಟ್ವಾಳ), ಡಾ. ಲತಾ ಫೆರ್ನಾಂಡಿಸ್ ಎ ಸಿ, (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಮೊಡಂಕಾಪು), ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ, ಮಾನವ ಹಕ್ಕುಗಳ ಸಂಯೋಜಕರು ನಿಹಾರಿಕಾ ಶೆಟ್ಟಿ ಉಪಸ್ಥಿತರಿದ್ದರು.
ಹರೇಣಿ ಕುಮಾರಿ ಡಿ. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಅನಂತ ಪದ್ಮನಾಭ ಮಾತಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಕ್ಕೆ ಗುರಿಯಾಗದೆ ತಮ್ಮ ಭವಿಷ್ಯದ ಬಗ್ಗೆ ನಿಗಾವಹಿಸಬೇಕೆಂಬ ಸಂದೇಶ ನೀಡಿದರು. ಜೊಸ್ವಿಟ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು