9:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ

30/09/2023, 10:39

ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ವಕೀಲರ ಸಂಘ, ಬಂಟ್ವಾಳ ಪೋಲಿಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ಜರುಗಿತು.


ವೇದಿಕೆಯಲ್ಲಿ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಯಾದ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು), ಅನಂತ ಪದ್ಮನಾಭ, (ಆರಕ್ಷಕ ನಿರೀಕ್ಷಕರು ಬಂಟ್ವಾಳ ನಗರ ಪೊಲೀಸ್ ಠಾಣೆ), ರಾಮಕೃಷ್ಣ (ಪಿ ಎಸ್ ಐ ಬಂಟ್ವಾಳ), ಡಾ. ಲತಾ ಫೆರ್ನಾಂಡಿಸ್ ಎ ಸಿ, (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಮೊಡಂಕಾಪು), ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ, ಮಾನವ ಹಕ್ಕುಗಳ ಸಂಯೋಜಕರು ನಿಹಾರಿಕಾ ಶೆಟ್ಟಿ ಉಪಸ್ಥಿತರಿದ್ದರು.
ಹರೇಣಿ ಕುಮಾರಿ ಡಿ. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಅನಂತ ಪದ್ಮನಾಭ ಮಾತಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಕ್ಕೆ ಗುರಿಯಾಗದೆ ತಮ್ಮ ಭವಿಷ್ಯದ ಬಗ್ಗೆ ನಿಗಾವಹಿಸಬೇಕೆಂಬ ಸಂದೇಶ ನೀಡಿದರು. ಜೊಸ್ವಿಟ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು