11:44 AM Monday20 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ ರಾಜಕಾರಣಿ!!

27/07/2021, 22:50

ಬೆಂಗಳೂರು(reporterkarnataka news): ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೊಂಡಿದ್ದಾರೆ. ಕರಾವಳಿಯ ಉಡುಪಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಈಗ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯದಲ್ಲಿ ಮಾತೃಪಕ್ಷವನ್ನು ತೊರೆದು ಬಂದವರಲ್ಲಿ ಇಬ್ಬರು ಮುಖ್ಯಮಂತ್ರಿ ಆದ್ದಂತಾಗಿದೆ. ಮೊದಲನೆಯದಾಗಿ ಸಿದ್ದರಾಮಯ್ಯ ಅವರು ಜನತಾ ಪರಿವಾರದಿಂದ ಹೊರ ಬಂದು ಕಾಂಗ್ರೆಸ್ ಸೇರಿದ ಬಳಿಕ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯಿತು. ಬಸವರಾಜ ಬೊಮ್ಮಾಯಿ ಅವರು ಕೂಡ ತನ್ನ ಮಾತೃಪಕ್ಷವಾದ ಜನತಾ ಪರಿವಾರದಿಂದ ಹೊರ ಬಂದು ಬಿಜೆಪಿ ಸೇರಿದ ಬಳಿಕ ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು 2006ರಲ್ಲಿ ಜೆಡಿಎಸ್ ಯಿಂದ ಹೊರಗಡೆ ಬಂದು 2013ರಲ್ಲಿ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾದರು. 2008ರಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿಗೆ ಬಂದ ಬಸವರಾಜ ಬೊಮ್ಮಾಯಿ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಜನತಾ ಪರಿವಾರದಿಂದ ಬಂದ ಎಸ್. ಆರ್. ಬೊಮ್ಮಾಯಿ ಅವರ ಪುತ್ರ. ಜನತಾ ಪರಿವಾರದಿಂದ ಹೊರ ಬಂದ ಬಳಿಕ ಅವರು ರಾಜಕೀಯವಾಗಿ ಆಯ್ಕೆ ಮಾಡಿಕೊಂಡಿರುವುದು ಬಿಜೆಪಿ ಪಕ್ಷವನ್ನು. ಯಡಿಯೂರಪ್ಪ ಅವರ ಮೊದಲ ಸರಕಾರದಲ್ಲಿಯೂ ಬೊಮ್ಮಾಯಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರು ಜನತಾ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿತ್ತು. ಇದರ ವಿರುದ್ಧ ಸುಪ್ರೀಂಕೊರ್ಟ್ ಗೆ ಮೊರೆ ಹೋಗಲಾಗಿತ್ತು. ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿದ ಕೇಂದ್ರದ ಕ್ರಮ ಅಸಿಂಧು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅಷ್ಟೊತ್ತಿಗೆ ಬೇರೆ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು