11:00 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು

30/09/2023, 15:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ,ಬಣಕಲ್,ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗುರುವಾರದಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.


ಕಾಫಿನಾಡಿನಲ್ಲಿ ಚಳಿಯ ವಾತಾವರಣ ನಿರ್ಮಾಣ ಗೊಂಡಿದೆ. ಕೊಟ್ಟಿಗೆಹಾರದಲ್ಲಿ ಗುರುವಾರ ಬೆಳಿಗ್ಗೆಯಿಂದ ಶನಿವಾರದವರೆಗೆ ಬೆಳಿಗ್ಗೆ ವರೆಗೆ 164.2ಮಿ.ಮೀ (16ಸೆ.ಮೀ)ಮಳೆ ದಾಖಲಾಗಿದೆ. ಶನಿವಾರವೂ ಮಳೆ ಮುಂದುವರೆದಿದ್ದು ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದ್ದು ರೈತರು ಮಳೆಯಿಂದ ಹೈರಾಣಾದ್ದಾರೆ. ಕಾಫಿ ನಾಡಿನಲ್ಲಿ ಈಗ ಅರೆಬಿಕಾ ಕಾಫಿ ಕೆಲವು ಕಡೆ ಹಣ್ಣಾಗುತ್ತಿದ್ದು ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ. ತೀರಾ ಮಳೆಯಿಂದ ರೊಬಸ್ಟ ಕಾಫಿ ಕೂಡ ಉದುರುತ್ತಿದೆ.ಇನ್ನು ಅತಿಯಾದ ಮಳೆಯ ಹಿನ್ನಲೆಯಲ್ಲಿ ಅಡಿಕೆ ಕೂಡ ಶೀತ ಬಾಧೆಯಿಂದ ಮರದಿಂದ ಅಡಿಕೆ ಉದುರುತ್ತಿದೆ. ಮಳೆಗಾಲದ ಸಕಾಲ ಮಳೆಗಳು ಬಾರದೇ ಈಗ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಳೆ ಬರುತ್ತಿರುವುದರಿಂದ ಹವಾಮಾನ ಬದಲಾವಣೆಗೊಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಅನಾನುಕೂಲವಾಗಿದೆ. .ಮಳೆಯಿಂದ ಕೊಟ್ಟಿಗೆಹಾರ, ಅತ್ತಿಗೆರೆ, ಸುತ್ತಮುತ್ತ ಸೇರಿದಂತೆ ವಿದ್ಯುತ್ ಕಣ್ಮುಚ್ಟಾಲೆಯಾಡುತ್ತಿದೆ.ಧಾರಾಕಾರ ಮಳೆಯಿಂದ ಜನರು ಹೈರಾಣಾಗುವಂತಾಗಿದೆ.ಮಳೆಯ ನಡುವೆ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು