11:41 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು

30/09/2023, 15:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ,ಬಣಕಲ್,ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗುರುವಾರದಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.


ಕಾಫಿನಾಡಿನಲ್ಲಿ ಚಳಿಯ ವಾತಾವರಣ ನಿರ್ಮಾಣ ಗೊಂಡಿದೆ. ಕೊಟ್ಟಿಗೆಹಾರದಲ್ಲಿ ಗುರುವಾರ ಬೆಳಿಗ್ಗೆಯಿಂದ ಶನಿವಾರದವರೆಗೆ ಬೆಳಿಗ್ಗೆ ವರೆಗೆ 164.2ಮಿ.ಮೀ (16ಸೆ.ಮೀ)ಮಳೆ ದಾಖಲಾಗಿದೆ. ಶನಿವಾರವೂ ಮಳೆ ಮುಂದುವರೆದಿದ್ದು ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದ್ದು ರೈತರು ಮಳೆಯಿಂದ ಹೈರಾಣಾದ್ದಾರೆ. ಕಾಫಿ ನಾಡಿನಲ್ಲಿ ಈಗ ಅರೆಬಿಕಾ ಕಾಫಿ ಕೆಲವು ಕಡೆ ಹಣ್ಣಾಗುತ್ತಿದ್ದು ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ. ತೀರಾ ಮಳೆಯಿಂದ ರೊಬಸ್ಟ ಕಾಫಿ ಕೂಡ ಉದುರುತ್ತಿದೆ.ಇನ್ನು ಅತಿಯಾದ ಮಳೆಯ ಹಿನ್ನಲೆಯಲ್ಲಿ ಅಡಿಕೆ ಕೂಡ ಶೀತ ಬಾಧೆಯಿಂದ ಮರದಿಂದ ಅಡಿಕೆ ಉದುರುತ್ತಿದೆ. ಮಳೆಗಾಲದ ಸಕಾಲ ಮಳೆಗಳು ಬಾರದೇ ಈಗ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಳೆ ಬರುತ್ತಿರುವುದರಿಂದ ಹವಾಮಾನ ಬದಲಾವಣೆಗೊಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಅನಾನುಕೂಲವಾಗಿದೆ. .ಮಳೆಯಿಂದ ಕೊಟ್ಟಿಗೆಹಾರ, ಅತ್ತಿಗೆರೆ, ಸುತ್ತಮುತ್ತ ಸೇರಿದಂತೆ ವಿದ್ಯುತ್ ಕಣ್ಮುಚ್ಟಾಲೆಯಾಡುತ್ತಿದೆ.ಧಾರಾಕಾರ ಮಳೆಯಿಂದ ಜನರು ಹೈರಾಣಾಗುವಂತಾಗಿದೆ.ಮಳೆಯ ನಡುವೆ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು