5:02 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2 ಸರಕಾರ !!

28/07/2021, 07:53

ಬೆಂಗಳೂರು(reporterkarnataka news): ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿ ಮಾಡುವುದಾದರೆ ಇಷ್ಟೆಲ್ಲ ರಂಪಾಟ ಮಾಡಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಅಗತ್ಯವಿತ್ತೇ..? ಇದು, ಬೊಮ್ಮಾಯಿ ನೂತನ ಮುಖ್ಯಮಂತ್ರಿ ಎಂದು ಬಿಜೆಪಿ ವರಿಷ್ಠರು ಘೋಷಣೆ ಮಾಡಿದ ಕ್ಷಣ ರಾಜ್ಯದ ಜನರಲ್ಲಿ ಮಾತ್ರವಲ್ಲದೆ, ಬಿಜೆಪಿಯೊಳಗೆ ಮೂಡಿ ಬಂದ ಪ್ರಶ್ನೆ. 

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ಹಾಗೂ ಪಕ್ಷದೊಳಗಿನ ಒಂದು ಗುಂಪು ಹಲವು ತಿಂಗಳಿನಿಂದ ಸಾಕಷ್ಟು ಕೆಲಸ ಮಾಡಿತ್ತು. ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ.ಯೋಗೀಶ್ವರ್, ಅರವಿಂದ ಬೆಲ್ಲದ್ ಇವರೆಲ್ಲ ಪಕ್ಷದೊಳಗಿನ ಪ್ರಬಲ ನಾಯಕರ ಬೆಂಗಾವಲಿನಲ್ಲಿಯೇ ಯಡಿಯೂರಪ್ಪ ವಿರುದ್ಧ ಬಂಡಾಯ ಸಾರಿದ್ದರು ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಚಾರ. ಈ ನಡುವೆ ಅದಕ್ಕೆ ಪೂರಕ ಎನ್ನುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿತ್ತು. ಮುಖ್ಯಮಂತ್ರಿ ಬದಲಾವಣೆ ಕುರಿತು ಬಹಳಷ್ಟು ಅಬ್ಬರ ತಾಳ ಕೇಳಿ ಬಂದಿತ್ತು. ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಿ ಅವರ ಪ್ರಭಾವವಿಲ್ಲದ ನಾಯಕನನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ರಾಜ್ಯ ಬಿಜೆಪಿಯ ಗುಂಪೊಂದು ಪ್ರಬಲ ಕನಸು ಕಂಡಿತ್ತು. ಆದರೆ ಅದೆಲ್ಲ ನುಚ್ಚುನೂರಾಗಿದೆ. ಯಡಿಯೂರಪ್ಪ ಅವರ ಬಹು ಆಪ್ತ ವಲಯಕ್ಕೆ ಸೇರಿದ ಬೊಮ್ಮಾಯಿ ಅವರನ್ನು ಹೊಸ ಮುಖ್ಯಮಂತ್ರಿಯಾಗಿ ಘೋಷಣೆ ಮಾಡುವ ಮೂಲಕ ಬಿಎಸ್ ವೈ ಅವರನ್ನು ಹೊರತುಪಡಿಸಿ ಕರ್ನಾಟಕದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಬಿಜೆಪಿ ಹೈಕಮಾಂಡ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.ಅದಲ್ಲದೆ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಆಯ್ಕೆಯಾದ ತಕ್ಷಣ ಮಾಧ್ಯಮ ಜತೆ ಮಾತನಾಡಿದ ಬೊಮ್ಮಾಯಿ ಅವರು ಯಡಿಯೂರಪ್ಪ ನನ್ನ ರಾಜಕೀಯ ಗುರು. ಅವರ ಮಾರ್ಗದರ್ಶನದಲ್ಲಿ ಕೆಲಸ ಮುಂದುವರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಯಡಿಯೂರಪ್ಪ ಅವರ ಗೆಲುವು ಆಗಿದೆ.

ಮುಂದೆ ಬೊಮ್ಮಾಯಿ ಸರಕಾರದಲ್ಲಿ ಯಡಿಯೂರಪ್ಪ ಅವರ ಮಾತು ನಡೆಯುತ್ತದೆಯೇ ಹೊರತು ಇತರರದ್ದಲ್ಲ ಎನ್ನುವುದು ಕೂಡ ಅಷ್ಟೇ ಸ್ಪಷ್ಟ.

ಇತ್ತೀಚಿನ ಸುದ್ದಿ

ಜಾಹೀರಾತು