10:08 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು ಕ್ರೆಡಾಯ್ ಮಹಿಳಾ ವಿಭಾಗದ ಉದ್ಘಾಟನೆ: ರಿಯಲ್ ಎಸ್ಟೇಟ್‌ನಲ್ಲಿ ಮಹಿಳೆಯರ ಸಬಲೀಕರಣ

30/09/2023, 17:47

ಮಂಗಳೂರು(reporterkarnataka.com): ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಕ್ರೆಡಾಯ್) ಮಂಗಳೂರು ವಿಭಾಗದ ಕ್ರೆಡಾಯ್ ಮಹಿಳಾ ವಿಭಾಗದ (ಸಿಡಬ್ಲ್ಯೂಡಬ್ಲ್ಯೂ) ಉದ್ಘಾಟನೆ ನಗರದ ಓಶಿಯನ್ ಪರ್ಲ್ ನಲ್ಲಿ
ಅದ್ದೂರಿಯಾಗಿ ನಡೆಯಿತು.


ಗೌರವಾನ್ವಿತ ಮುಖ್ಯ ಅತಿಥಿಗಳಾದ ಜಿಲ್ಲಾಧಿಕಾರಿ
ಮುಲೈ ಮುಹಿಲನ್ ಎಂ.ಪಿ., ಗೌರವ ಅತಿಥಿಯಾಗಿ ಕ್ರೆಡಾಯ್ ಕರ್ನಾಟಕದ ಅಧ್ಯಕ್ಷ ಪ್ರದೀಪ್ ರಾಯ್ಕರ್ ಮತ್ತು ಸಿಡಬ್ಲ್ಯೂಡಬ್ಲ್ಯೂ ರಾಷ್ಟ್ರೀಯ ಕಾರ್ಯದರ್ಶಿ ಸಾರಾ ಜೇಕಬ್ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು. ಸಿಡಬ್ಲ್ಯೂಡಬ್ಲ್ಯೂ ಮಂಗಳೂರು ವಿಭಾಗದ ಸಂಯೋಜಕರಾದ ಕೃತೀನ್ ಅಮೀನ್, ಸಿಡಬ್ಲ್ಯೂಡಬ್ಲ್ಯೂ ಮಂಗಳೂರು ವಿಭಾಗದ ಕಾರ್ಯದರ್ಶಿ ರಜನಿ ಪತ್ರಾವೊ ಉಪಸ್ಥಿತರಿದ್ದರು. ಖಜಾಂಚಿ ಸುದೀಶ್ ಕರುಣಾಕರನ್ ಅವರು ಸ್ವಾಗತಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕ್ರೆಡಾಯ್ ಮಂಗಳೂರು ವಿಭಾಗದ ಅಧ್ಯಕ್ಷ ವಿನೋದ್ ಪಿಂಟೊ ಅವರು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಹಿಳೆಯರ ಸಹಭಾಗಿತ್ವದ ಮಹತ್ವವನ್ನು ಒತ್ತಿ ಹೇಳಿದರು.
ರಜನಿ ಪತ್ರಾವೊ ಅವರನ್ನು ಸಿಡಬ್ಲ್ಯೂಡಬ್ಲ್ಯೂ ಮಂಗಳೂರು ವಿಭಾಗದ ಕಾರ್ಯದರ್ಶಿಯಾಗಿ ಮತ್ತು ಕೃತೀನ್ ಅಮೀನ್ ಸಂಯೋಜಕಿಯ ಹುದ್ದೆಯನ್ನು ವಹಿಸಿಕೊಂಡರು. ಈ ಸಮಾರಂಭದಲ್ಲಿ ಸಾರಾ ಜೇಕಬ್ ನೇತೃತ್ವದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜರಗಿತು. ಸಿಡಬ್ಲ್ಯೂಡಬ್ಲ್ಯೂ ಮಂಗಳೂರು ವಿಭಾಗದ ಸಂಯೋಜಕರಾದ ಕೃತೀನ್ ಅಮೀನ್ ಅವರು ಮಹಿಳಾ ನಾಯಕತ್ವದ ಬಗ್ಗೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ಪ್ರಸ್ತುತಪಡಿಸಿದರು.
ಕ್ರೆಡಾಯ್ ಕರ್ನಾಟಕದ ಅಧ್ಯಕ್ಷ ಪ್ರದೀಪ್ ರಾಯ್ಕರ್, ಸಿಡಬ್ಲ್ಯೂಡಬ್ಲ್ಯೂ ಆರಂಭಿಸಿದ ಕಾರ್ಯಗಳು, ಚಟುವಟಿಕೆಗಳು ಮತ್ತು ತರಬೇತಿ ಕಾರ್ಯಕ್ರಮಗಳ ಒಳನೋಟಗಳನ್ನು ಹಂಚಿಕೊಂಡರು, ಕೌಶಲ್ಯ ಅಭಿವೃದ್ಧಿ ಮತ್ತು ಸಮುದಾಯ ಕಲ್ಯಾಣಕ್ಕೆ ಕ್ರೆಡಾಯ್ ಬದ್ಧತೆಯನ್ನು ವಿವರಿಸಿದರು. ಸಾರಾ ಜೇಕಬ್, ಸಿಡಬ್ಲ್ಯೂಡಬ್ಲ್ಯೂ ರಾಷ್ಟ್ರೀಯ ಕಾರ್ಯದರ್ಶಿ, ಸಿಎಸ್ಆರ್ ಚಟುವಟಿಕೆಗಳು, ಆರ್ಥಿಕತೆ ಸುಸ್ಥಿರತೆಯ ಆನ್‌ಲೈನ್ ತರಗತಿಗಳು ಮತ್ತು ಕಾರ್ಮಿಕ ಅಭಿವೃದ್ಧಿಗೆ ಮಹಿಳೆಯರ ಅಮೂಲ್ಯ ಕೊಡುಗೆ ಕುರಿತು ಚರ್ಚಿಸಿದರು. ಮುಖ್ಯ ಅತಿಥಿಗಳಾದ ಮಂಗಳೂರು ಜಿಲ್ಲಾಧಿಕಾರಿ ಮುಲೈ ಮುಹಿಲನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಮುಲೈ ಮುಹಿಲನ್ ಅವರು
ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಿದರು.
ರಿಯಲ್ ಎಸ್ಟೇಟ್ ಉದ್ಯಮಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಸ್ಮರಿಸಿ ಎಲ್ಲ ಗಣ್ಯರಿಗೆ ಸ್ಮರಣಿಕೆಗಳನ್ನು ನೀಡಲಾಯಿತು. ಸಿಡಬ್ಲ್ಯೂಡಬ್ಲ್ಯೂ ಕಾರ್ಯದರ್ಶಿ ರಜನಿ ಪತ್ರಾವೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು