9:32 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾದುವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

30/09/2023, 22:27

ಮಂಗಳೂರು(reporterkarnataka.com): ನಗರದ ಪಾದುವ ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.


ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರುಮಾರ್ಗ ಸಂಘವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲೇಜು ನಾಯಕರ ಪಾತ್ರ ಯಾವ ರೀತಿ ಕಾಲೇಜಿನ ಅಭಿವೃದ್ಧಿಗೆ ಪೂರಕವಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಪಾದುವ ಶಿಕ್ಷಣ ಸಂಸ್ಥೆಯ ಸಂಚಾಲಕ ವಂದನೀಯ ಫಾ| ವಿನ್ಸೆಂಟ್ ಮೊಂತೇರೊ ಅವರು ಆಶೀರ್ವಾದಿಸಿ, ವಿದ್ಯಾರ್ಥಿ ಸಂಘವು ನಿರಂತರ ಪ್ರಯತ್ನದಿಂದ ಉತ್ತಮ ಚಟುವಟಿಕೆಗಳನ್ನು ನಡೆಸಿ ಕಾಲೇಜಿನ ಕೀರ್ತಿ ಹೆಚ್ಚಿಸುವಂತೆ ಸಲಹೆ ನೀಡಿದರು.
ಇನ್ನೋರ್ವ ಅತಿಥಿಯಾದ ಅಡ್ವಕೇಟ್ ಹಾಗೂ ಮಾಜಿ ಕಾರ್ಪೊರೇಟರ್ ಮರಿಯಮ್ಮ ಥೋಮಸ್‌ ಉತ್ತಮ ನಾಯಕತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ಅರುಣ್ ವಿಲ್ಸನ್ ಲೋಬೋ ಅವರು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ನೆರವೇರಿಸಿದರು. ಉಪಪ್ರಾಂಶುಪಾಲರಾದ ಪ್ರೊ| ರೋಶನ್ ಸಾಂತುಮಾಯೊರ್, ವಿದ್ಯಾರ್ಥಿ ಸಂಘದ ಸಂಯೋಜಕರಾದ ರಿನಾ ಹಾಗೂ ಅಕ್ಷತಾ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೆಲಿಟಾ ಡಿಸೋಜ ವಂದಿಸಿದರು. ವಿದ್ಯಾರ್ಥಿಗಳಾದ ಆಲ್ವಿನ್ ಹಾಗೂ ಮೆಲಿಟಾ ರೊಸಾರಿಯೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು