6:37 PM Saturday1 - June 2024
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ ಅಗತ್ಯ: ನೈಋತ್ಯ… ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಗ್ರಾಮ ಪಂಚಾಯಿತಿ… ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ಕಿರುಕುಳ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ… ಕೊಪ್ಪಳ: ಬಾಡಿಗೆ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗನ ತ್ರಿವಳಿ ಶವ ಪತ್ತೆ; ಕೊಲೆ… ಮತದಾನ ಕುರಿತು ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿ ಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಎಚ್.… ಅಜ್ಞಾತ ಸ್ಥಳದಿಂದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೊ: ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ… ಭಾರತದೊಂದಿಗೆ ಬಾಹ್ಯಾಕಾಶ ಸಹಯೋಗ ನಕ್ಷತ್ರದಾಚೆಗೂ ಮುಂದುವರಿಯುವುದು: ಅಮೆರಿಕ ರಾಯಭಾರಿ ಗಾರ್ಸೆಟ್ಟಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಹೋದರ ಪುತ್ರಿಯ ವಿವಾಹ: ರಾಜ್ಯಪಾಲ, ಸಿಎಂ, ಡಿಸಿಎಂ,… ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ?:… ಉಡುಪಿ: ನಡು ರಸ್ತೆಯಲ್ಲೇ ಗ್ಯಾಂಗ್ ವಾರ್ ವೀಡಿಯೊ ವೈರಲ್; ಕೊನೆಗೂ ಎಚ್ಚೆತ್ತ ಪೊಲೀಸರಿಂದ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾದುವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

30/09/2023, 22:27

ಮಂಗಳೂರು(reporterkarnataka.com): ನಗರದ ಪಾದುವ ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.


ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರುಮಾರ್ಗ ಸಂಘವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲೇಜು ನಾಯಕರ ಪಾತ್ರ ಯಾವ ರೀತಿ ಕಾಲೇಜಿನ ಅಭಿವೃದ್ಧಿಗೆ ಪೂರಕವಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಪಾದುವ ಶಿಕ್ಷಣ ಸಂಸ್ಥೆಯ ಸಂಚಾಲಕ ವಂದನೀಯ ಫಾ| ವಿನ್ಸೆಂಟ್ ಮೊಂತೇರೊ ಅವರು ಆಶೀರ್ವಾದಿಸಿ, ವಿದ್ಯಾರ್ಥಿ ಸಂಘವು ನಿರಂತರ ಪ್ರಯತ್ನದಿಂದ ಉತ್ತಮ ಚಟುವಟಿಕೆಗಳನ್ನು ನಡೆಸಿ ಕಾಲೇಜಿನ ಕೀರ್ತಿ ಹೆಚ್ಚಿಸುವಂತೆ ಸಲಹೆ ನೀಡಿದರು.
ಇನ್ನೋರ್ವ ಅತಿಥಿಯಾದ ಅಡ್ವಕೇಟ್ ಹಾಗೂ ಮಾಜಿ ಕಾರ್ಪೊರೇಟರ್ ಮರಿಯಮ್ಮ ಥೋಮಸ್‌ ಉತ್ತಮ ನಾಯಕತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ಅರುಣ್ ವಿಲ್ಸನ್ ಲೋಬೋ ಅವರು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ನೆರವೇರಿಸಿದರು. ಉಪಪ್ರಾಂಶುಪಾಲರಾದ ಪ್ರೊ| ರೋಶನ್ ಸಾಂತುಮಾಯೊರ್, ವಿದ್ಯಾರ್ಥಿ ಸಂಘದ ಸಂಯೋಜಕರಾದ ರಿನಾ ಹಾಗೂ ಅಕ್ಷತಾ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೆಲಿಟಾ ಡಿಸೋಜ ವಂದಿಸಿದರು. ವಿದ್ಯಾರ್ಥಿಗಳಾದ ಆಲ್ವಿನ್ ಹಾಗೂ ಮೆಲಿಟಾ ರೊಸಾರಿಯೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು