11:48 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ; ಸೇರ್ತಾರಾ ಕಾಂಗ್ರೆಸ್ಸಿಗೆ?

01/10/2023, 11:50

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ತೊರೆದು ಜನತಾ ದಳ ಸೇರಿದ್ದ ಮೂಡಿಗೆರೆಯ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ ಸಿಲುಕಿದ್ದಾರೆ. ಅವರು ಸೇರಿದ್ದ ಜಾತ್ಯತೀತ ಜನತಾ ದಳವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಮೈತ್ರಿ ಮಾಡಿಸಿಕೊಂಡಿದ್ದಾರೆ.
ಮೂಡಿಗೆರೆ ಕುಮಾರಸ್ವಾಮಿ ಜನತಾ ದಳದಲ್ಲಿ ಉಳಿದರೆ ಮತ್ತೆ ಅವರು ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಮುಂತಾದ ಬಿಜೆಪಿ ನಾಯಕರಿಗೆ ಮುಖಾಮುಖಿಯಾಗಬೇಕಾಗುತ್ತದೆ. ಬಿಜೆಪಿ ಸಂಗ ಬೇಡವೆಂದು ಜನತಾದಳ ಸೇರಿದ ಕುಮಾರಸ್ವಾಮಿ ಅವರಿಗೆ ‘ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ’ ಎನ್ನುವ ಸನ್ನಿವೇಶ ಎದುರಾಗಿದೆ.
ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಾಗಿರುವಾಗಲೇ ಬಿಜೆಪಿಯ ಒಂದು ಗುಂಪು ಅವರ ವಿರುದ್ದ ಹಲ್ಲು ಮಸೆಯುತ್ತಿತ್ತು. ಕುಮಾರಸ್ವಾಮಿ ಕಮುನಿಸ್ಟ್ ಎಂಬ ಪುಕಾರು ಎಬ್ಬಿಸಿದ್ದರು. ಹಲ್ಲೆ ಕೂಡ ನಡೆದಿತ್ತು. ಇಷ್ಟೆಲ್ಲ ನಡೆದ ಮೇಲೆ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಯಿತು. ಕಾಂಗ್ರೆಸ್ ಗೆ ಹೋಗೋಣ ಅಂದ್ರೆ ಅಲ್ಲಿ ನಯನಾ ಮೋಟಮ್ಮ ಅವರಿಗೆ ಟಿಕೆಟ್ ಫೈನಲ್ ಆಗಿತ್ತು. ನಂತರ ಉಳಿದಿರುವ ರಾಜಕೀಯ ಆಸರೆ ಎಂದರೆ ಜಾತ್ಯತೀತ ಜನತಾ ದಳ ಮಾತ್ರ. ಹಾಗೆ ಕುಮಾರಸ್ವಾಮಿ ಅವರು ಮತ್ತೊಬ್ಬ ಕುಮಾರಸ್ವಾಮಿಯ ಜನತಾ ದಳ ಬಸ್ಸನ್ನು ಏರಿಯೇ ಬಿಟ್ಟರು. ಈಗ ವಿಧಾನಸಭೆ ಚುನಾವಣೆ ಮುಗಿದು 4 ತಿಂಗಳು ಕಳೆದಿವೆ. ರಾಜಕೀಯ ಸ್ಥಿತ್ಯಂತರ ಮತ್ತೆ ರಾಜ್ಯದಲ್ಲಿ ಪ್ರಾರಂಭವಾಗಿದೆ. ಜನತಾ ದಳ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ 40+ ಸೀಟುಗಳ ಕನಸು ಕಂಡಿದ್ದ ಜನತಾ ದಳಕ್ಕೆ ಸಿಕ್ಕಿದ್ದು ಬರೇ 19 ಸೀಟು. ಅದಲ್ಲದೆ ತಮ್ಮ ರಾಜಕೀಯ ವಿರೋಧಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಇವೆಲ್ಲದರ ಫಲಶೃತಿ ಜನತಾ ದಳ ಮತ್ತು ಬಿಜೆಪಿಯ ಮೈತ್ರಿ ಆಗಿದೆ.
ಕುಮಾರಸ್ವಾಮಿ ಮತ್ತು ಜೆ.ಪಿ. ನಡ್ಡಾ ಅವರ ನಡುವೆ ಒಡಂಬಡಿಕೆ ಏನೋ ನಡೆದು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ಬಿಜೆಪಿ ಸಂಗ ಬೇಡವೆಂದು ಜನತಾ ದಳ ಸೇರಿದ ಮೂಡಿಗೆರೆಯ ಕುಮಾರಸ್ವಾಮಿ ಪಾಡೇನು? ಇವೆಲ್ಲದಕ್ಕೆ ಉತ್ತರ ಕಾಂಗ್ರೆಸ್ ಸೇರ್ಪಡೆ ಆಗಿದೆ. ಸದ್ಯದಲ್ಲೇ ಕುಮಾರಸ್ವಾಮಿ ಅವರು ಕೈ ಪಾಳಯ ಸೇರುವುದು ಬಹುತೇಕ ಗ್ಯಾರಂಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು