4:43 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ ನಾಯಕನಿಗೆ ಒಲಿದ ಅಧಿಕಾರ

28/07/2021, 11:37

ಬೆಂಗಳೂರು(reporterkarnataka news): ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರತಿಜ್ಞೆ ಸ್ವೀಕರಿಸಿದರು. ರಾಜ್ಯಪಾಲ ತಾವರ್ ಚಂದ್ರ ಗೆಹಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. 

ಮಂಗಳವಾರ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನಾಗಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಯಿತು. ಜನತಾ ಪರಿವಾರದಲ್ಲಿ ರಾಜಕೀಯ ಜೀವನ ಆರಂಭಿಸಿದ ಬೊಮ್ಮಾಯಿ ಅವರು 2008ರಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದರು. ನಂತರ ಯಡಿಯೂರಪ್ಪ ಅವರ ಮೊದಲ ಸರಕಾರದಲ್ಲಿ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದರು. ಡಾ. ವಿ.ಎಸ್. ಆಚಾರ್ಯ ಅವರ ಅಕಾಲಿಕ ನಿಧನದ ಬಳಿಕ ಅವರಿಗೆ ಗೃಹ ಖಾತೆಯ ಜವಾಬ್ದಾರಿ ನೀಡಲಾಯಿತು. ಮೈತ್ರಿ ಸರಕಾರ ಪತನಗೊಂಡು ಬಳಿಕ ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಯಡಿಯೂರಪ್ಪ ಸರಕಾರದಲ್ಲಿ ಅವರು ಗೃಹ ಸಚಿವರಾಗಿ ನಿಯುಕ್ತಿಗೊಂಡರು. ಬೊಮ್ಮಾಯಿ ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರು ಜನತಾ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು