2:09 PM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ

01/10/2023, 22:51

ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ.
ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್ ಹಾಗೂ ಸಿಬ್ಬಂದಿ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1.19 ಲಕ್ಷ ರೂ.ಗಳ ಮೌಲ್ಯದ ಕಾಪರ್ ಸಲ್ಫೈಡ್ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃಷಿ ಜಾರಿದಳ ಹಾಗೂ ಎಲ್ಲಾ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು