6:41 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ

01/10/2023, 22:51

ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ.
ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್ ಹಾಗೂ ಸಿಬ್ಬಂದಿ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1.19 ಲಕ್ಷ ರೂ.ಗಳ ಮೌಲ್ಯದ ಕಾಪರ್ ಸಲ್ಫೈಡ್ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃಷಿ ಜಾರಿದಳ ಹಾಗೂ ಎಲ್ಲಾ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು