11:44 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಲಿಂಗಸಗೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಶಾಸ್ತ್ರೀ ಜನ್ಮದಿನಾಚರಣೆ

02/10/2023, 17:35

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ಸಮೀಪದ ಈಚನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹನೀಯರ ಜಯಂತಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ಶಿವಪ್ಪ, ಗ್ರಾಮಗಳು ಅಭಿವೃದ್ದಿಯಾದರೆ ದೇಶದ ಅಭಿವೃದ್ದಿ ಎಂದು ಸಾರಿದ ಮಹಾತ್ಮ ಗಾಂಧೀಜಿ ಮತ್ತು ಜೈ ಜವಾನ ಜೈ ಕಿಸಾನ್ ಎಂಬ ಘೋಷ ವಾಕ್ಯದೊಂದಿಗೆ ರೈತರಲ್ಲಿ ಆತ್ಮಸ್ಥೈರ್ಯ ತುಂಬಿದ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿ ಅವರ ವಿಚಾರಧಾರೆಗಳು ನಮಗೆಲ್ಲ ದಾರಿದೀಪವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಆದಪ್ಪ ಮೇಟಿ, ಗ್ರಾಪಂ ಸದಸ್ಯರಾದ ಮರಿಯಪ್ಪ ಕಟ್ಟಿಮನಿ, ಅಮರಪ್ಪ ದಳಪತಿ, ಅಂಗನವಾಡಿ ಶಿಕ್ಷಕರಾದ ಸರಸ್ವತಿ ಬಡೀಗೆರ್ , ಶರಣಮ್ಮ, ಅನುಸೂಯಾ, ಗ್ರಾಮಸ್ಥರಾದ ಅಯ್ಯಪ್ಪ ಗಾಳಪೂಜಿ, ಹುಲಗಪ್ಪ ಕಟ್ಟಿಮನಿ, ಗ್ರಾಪಂ ಸಿಬ್ಬಂದಿಗಳಾದ ಸುರೇಶ, ಅಮರೇಶ, ವಿಜಯಲಕ್ಷ್ಮಿ,ಅಂಗನವಾಡಿ ಕೇಂದ್ರದ ಮಕ್ಕಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು