4:35 AM Monday28 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಲಿಂಗಸಗೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಶಾಸ್ತ್ರೀ ಜನ್ಮದಿನಾಚರಣೆ

02/10/2023, 17:35

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ಸಮೀಪದ ಈಚನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹನೀಯರ ಜಯಂತಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ಶಿವಪ್ಪ, ಗ್ರಾಮಗಳು ಅಭಿವೃದ್ದಿಯಾದರೆ ದೇಶದ ಅಭಿವೃದ್ದಿ ಎಂದು ಸಾರಿದ ಮಹಾತ್ಮ ಗಾಂಧೀಜಿ ಮತ್ತು ಜೈ ಜವಾನ ಜೈ ಕಿಸಾನ್ ಎಂಬ ಘೋಷ ವಾಕ್ಯದೊಂದಿಗೆ ರೈತರಲ್ಲಿ ಆತ್ಮಸ್ಥೈರ್ಯ ತುಂಬಿದ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿ ಅವರ ವಿಚಾರಧಾರೆಗಳು ನಮಗೆಲ್ಲ ದಾರಿದೀಪವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಆದಪ್ಪ ಮೇಟಿ, ಗ್ರಾಪಂ ಸದಸ್ಯರಾದ ಮರಿಯಪ್ಪ ಕಟ್ಟಿಮನಿ, ಅಮರಪ್ಪ ದಳಪತಿ, ಅಂಗನವಾಡಿ ಶಿಕ್ಷಕರಾದ ಸರಸ್ವತಿ ಬಡೀಗೆರ್ , ಶರಣಮ್ಮ, ಅನುಸೂಯಾ, ಗ್ರಾಮಸ್ಥರಾದ ಅಯ್ಯಪ್ಪ ಗಾಳಪೂಜಿ, ಹುಲಗಪ್ಪ ಕಟ್ಟಿಮನಿ, ಗ್ರಾಪಂ ಸಿಬ್ಬಂದಿಗಳಾದ ಸುರೇಶ, ಅಮರೇಶ, ವಿಜಯಲಕ್ಷ್ಮಿ,ಅಂಗನವಾಡಿ ಕೇಂದ್ರದ ಮಕ್ಕಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು