1:30 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

“ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್ ಜೈಲಿನೊಳಗೆ ಹೋದ

28/07/2021, 18:21

ಮಂಗಳೂರು(reporterkarnatakanews): ಮೊಬೈಲ್ ಫೋನ್ ಮೂಲಕ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ ‘ನಗರದ ಪೊಲೀಸ್ ಠಾಣೆಗೆ ಆಟೋರಿಕ್ಷಾ ಚಾಲಕ ತನಗೆ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಜನವರಿ ತಿಂಗಳಿನಲ್ಲಿ ಪೋಷಕರ ಜತೆ ಕಂಕನಾಡಿ ನಗರ ಠಾಣೆಗೆ ತಂದೆಯ ಜೊತೆ ದೂರು ನೀಡಲು ಬಂದಿದ್ದಳು.

ಈ ವೇಳೆ ತನಿಖೆ ವೇಳೆ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಮೆಸೇಜ್ ಮಾಡಿ ‘ನೀನು ಎಲ್ಲಿದ್ದಿಯಾ, ಮನೆಯಲ್ಲಿ ಒಬ್ಬನೇ ಇದ್ದೀನಿ, ನಿನ್ನ ಮನೆಯ ಹತ್ತಿರ ರೌಂಡ್ಸ್ ಬಂದಾಗ ಸಿಗುತ್ತೇನೆ ಎಂದು ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಮಂಗಳೂರು ನಗರ ಠಾಣೆಯ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದರು. ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು