7:54 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಹಲ್ಯಾಳ: ಮಹಾತ್ಮ ಗಾಂಧಿ, ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ; ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

02/10/2023, 20:53

ಶಿವರಾಯ ಲಕ್ಷಣ್ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ನಿಮಿತ್ತವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ ಅವರು ಶಾಲೆಯ ಎಂಟನೇ ತರಗತಿಯ 67 ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯರಾದ ಮಂಜುನಾಥ ಹತ್ತಿ ಮಾತನಾಡಿ, ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ತಮ್ಮ ಜೀವನಕ್ಕೂ ಅಳವಡಿಸಿಕೊಳ್ಳಬೇಕು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನೀಡಿ ಶಾಲೆಗೆ ಹಾಗೂ ಗ್ರಾಮಕ್ಕೆ ಹೆಸರು ಬೇಕು ಎಂದರು.


ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ದೀಪಕ್ ಮರಗುಂಡಿ ಮಾತನಾಡಿದ ಮುಂಬರುವ ದಿನಗಳಲ್ಲಿ ಗ್ರಾಮಕ್ಕೆ ಒಂದು ಪದವಿ ಪೂರ್ವ ಕಾಲೇಜಿನ ಅವಶ್ಯಕತೆ ಇದ್ದು ನಮ್ಮ ಗ್ರಾಮದಲ್ಲಿ ಪದವಿಪೂರ್ವ ಕಾಲೇಜನ್ನು ಮಂಜೂರು ಮನವಿ ಮಾಡಲಾಗುವುದು. ಈ ಶಾಲೆಗೆ ಬಡ ವಿದ್ಯಾರ್ಥಿಗಳು ಬರುವುದರಿಂದ ಎಲ್ಲ ವಿದ್ಯಾರ್ಥಿಗಳಿಗೂ ಸಮನಾದ ರೀತಿಯಲ್ಲಿ ಬ್ಯಾಗ್ ಕೊಡಿಸುವ ಆಸೆ ನನ್ನದಾಗಿತ್ತು. ಇಂದು ಎಲ್ಲ ವಿದ್ಯಾರ್ಥಿಗಳಿಗೂ ಬ್ಯಾಗ್ ವಿತರಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಮುದುಕಣ್ಣ ಸೇಗುಣಿಸಿ, ಉಪಾಧ್ಯಕ್ಷರಾದ ವಿಠ್ಠಲ ಮಂಗಸೂಳಿ, ಮಹದೇವ್ ಜಾಬಗೌಡರ, ಶಶಿಕಾಂತ ದಳವಾಯಿ, ಸಂತೋಷ್ ಕಾಂಬಳೆ, ಮುತ್ತಪ್ಪ ಸನದಿ, ಸಿದ್ದಪ್ಪ ಲೋಕೂರ, ಮುಖಂಡರಾದ ಮಹಾದೇವ್ ತಕತರಾವ ಮತ್ತು ಶಿಕ್ಷಕ ವರ್ಗಹಾಗೂ ಮುದ್ದು ವಿದ್ಯಾರ್ಥಿಗಳು ಹಾಗೂ ಸಮಸ್ತ ಹಲ್ಯಾಳ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು