11:31 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಇನ್ನರ್ ವೀಲ್ ಜಿಲ್ಲೆ 318 ರ District Rally ‘ಸ್ವರ್ಣ ಪರ್ಬ’

02/10/2023, 21:05

ಮಂಗಳೂರು(reporterkarnataka.com): ಇನ್ನರ್ ವೀಲ್ ಜಿಲ್ಲೆ 318 ರ ಜಿಲ್ಲಾ ರ್ಯಾಲಿ ‘ ಸ್ವರ್ಣ ಪರ್ಬ’ ‘ ಭಾನುವಾರ ನಗರದ ಟಿ. ವಿ. ರಮಣ ಪೈ ಹಾಲಿನಲ್ಲಿ ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ ಅವರ ನೇತೃತ್ವದಲ್ಲಿ ನಡೆಯಿತು.
ಇನ್ನರ್ ವೀಲ್ ಮಂಗಳೂರು ಉತ್ತರದ ಚಾರ್ಟರ್ ಸದಸ್ಯೆ
ಉಷಾ ರವಿರಾಜ್ ಅವರು ಇನ್ನರ್ ವೀಲ್ ಪ್ರಾರ್ಥನೆ ಮಾಡಿದರು. ಕ್ಲಬ್ ನ ಅಧ್ಯಕ್ಷೆ ಗೀತಾ ಬಿ. ರೈ ಅವರು ಸ್ವಾಗತಿಸಿದರು. ರ್ಯಾಲಿ ಚೇರ್ಮನ್ ಚಿತ್ರಾ ವಿ. ರಾವ್ ಅವರು ರ್ಯಾಲಿ ಸ್ವರ್ಣ ಪರ್ಬದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನು ಹಾಡಿನ ಮೂಲಕ ವಿವರಿಸಿದರು. ಕಾರ್ಯದರ್ಶಿ ಶಬರಿ ಕಡಿದಾಲ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಕೆ ಕಳುಹಿಸಿದವರ ವಿವರ ನೀಡಿದರು. ಚೇರ್ಮನ್ ಪೂರ್ಣಿಮಾ ರವಿ ಅವರು 2023-24ನೇ ಸಾಲಿನಲ್ಲಿ ಜಿಲ್ಲೆ 318 ರಲ್ಲಿ ನಡೆದ ಪ್ರಾಜೆಕ್ಟ್, ಅದರ ಪ್ರಯೋಜನ ಪಡೆದವರ ಹಾಗೂ ವಿನಿಯೋಗ ಮಾಡಿದ ಹಣದ ವಿವರಗಳನ್ನು ತಿಳಿಸಿ, ಕಾರ್ಯ ಕ್ರಮದ ಬಗ್ಗೆ ಮೆಚ್ಚುಗೆ ಮಾತನ್ನು ವ್ಯಕ್ತಪಡಿಸಿದರು. ಇತರ ಕ್ಲಬ್ ಗಳಿಂದ ಬಂದ ಮಾಜಿ ಜಿಲ್ಲಾ ಚೇರ್ ಮೆನ್ ರವರನ್ನು ಗೌರವಿಸಲಾಯಿತು.
ಉಪ ಚೇರ್ಮನ್ ವೈಶಾಲಿ ಕುಡ್ವ ವಂದಿಸಿದರು. ಜಿಲ್ಲಾ ಖಜಾಂಚಿ ರಜನಿ ಭಟ್ ಹಾಗೂ ಜಿಲ್ಲಾ ಎಡಿಟರ್ ಉಮಾ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಡೆಸಿಕೊಟ್ಟ ಇನ್ನರ್ ವೀಲ್ ಕ್ಲಬ್ ಮಂಗಳೂರು ಉತ್ತರ ದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಾಲಿನಿ ಹೆಬ್ಬಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು