2:28 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಇನ್ನರ್ ವೀಲ್ ಜಿಲ್ಲೆ 318 ರ District Rally ‘ಸ್ವರ್ಣ ಪರ್ಬ’

02/10/2023, 21:05

ಮಂಗಳೂರು(reporterkarnataka.com): ಇನ್ನರ್ ವೀಲ್ ಜಿಲ್ಲೆ 318 ರ ಜಿಲ್ಲಾ ರ್ಯಾಲಿ ‘ ಸ್ವರ್ಣ ಪರ್ಬ’ ‘ ಭಾನುವಾರ ನಗರದ ಟಿ. ವಿ. ರಮಣ ಪೈ ಹಾಲಿನಲ್ಲಿ ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ ಅವರ ನೇತೃತ್ವದಲ್ಲಿ ನಡೆಯಿತು.
ಇನ್ನರ್ ವೀಲ್ ಮಂಗಳೂರು ಉತ್ತರದ ಚಾರ್ಟರ್ ಸದಸ್ಯೆ
ಉಷಾ ರವಿರಾಜ್ ಅವರು ಇನ್ನರ್ ವೀಲ್ ಪ್ರಾರ್ಥನೆ ಮಾಡಿದರು. ಕ್ಲಬ್ ನ ಅಧ್ಯಕ್ಷೆ ಗೀತಾ ಬಿ. ರೈ ಅವರು ಸ್ವಾಗತಿಸಿದರು. ರ್ಯಾಲಿ ಚೇರ್ಮನ್ ಚಿತ್ರಾ ವಿ. ರಾವ್ ಅವರು ರ್ಯಾಲಿ ಸ್ವರ್ಣ ಪರ್ಬದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನು ಹಾಡಿನ ಮೂಲಕ ವಿವರಿಸಿದರು. ಕಾರ್ಯದರ್ಶಿ ಶಬರಿ ಕಡಿದಾಲ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಕೆ ಕಳುಹಿಸಿದವರ ವಿವರ ನೀಡಿದರು. ಚೇರ್ಮನ್ ಪೂರ್ಣಿಮಾ ರವಿ ಅವರು 2023-24ನೇ ಸಾಲಿನಲ್ಲಿ ಜಿಲ್ಲೆ 318 ರಲ್ಲಿ ನಡೆದ ಪ್ರಾಜೆಕ್ಟ್, ಅದರ ಪ್ರಯೋಜನ ಪಡೆದವರ ಹಾಗೂ ವಿನಿಯೋಗ ಮಾಡಿದ ಹಣದ ವಿವರಗಳನ್ನು ತಿಳಿಸಿ, ಕಾರ್ಯ ಕ್ರಮದ ಬಗ್ಗೆ ಮೆಚ್ಚುಗೆ ಮಾತನ್ನು ವ್ಯಕ್ತಪಡಿಸಿದರು. ಇತರ ಕ್ಲಬ್ ಗಳಿಂದ ಬಂದ ಮಾಜಿ ಜಿಲ್ಲಾ ಚೇರ್ ಮೆನ್ ರವರನ್ನು ಗೌರವಿಸಲಾಯಿತು.
ಉಪ ಚೇರ್ಮನ್ ವೈಶಾಲಿ ಕುಡ್ವ ವಂದಿಸಿದರು. ಜಿಲ್ಲಾ ಖಜಾಂಚಿ ರಜನಿ ಭಟ್ ಹಾಗೂ ಜಿಲ್ಲಾ ಎಡಿಟರ್ ಉಮಾ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಡೆಸಿಕೊಟ್ಟ ಇನ್ನರ್ ವೀಲ್ ಕ್ಲಬ್ ಮಂಗಳೂರು ಉತ್ತರ ದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಾಲಿನಿ ಹೆಬ್ಬಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು