10:02 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ

03/10/2023, 13:27

ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ತರಲಾಗಿದ್ದು, ಅ.2ರ ಸೋಮವಾರ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿಜೀ ಪ್ರತಿಮೆಗೆ ಪುಷ್ಪಾರ್ಚಾಣೆ ಮಾಡಿ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗಡೆ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.


ಗಾಂಧಿಯವರ ವಿಚಾರಧಾರೆ ಎಂದಿಗೂ ಸಾರ್ವಕಾಲಿಕ. ಸ್ವಚ್ಛತೆ ಬಗೆಗಿದ್ದ ಕಾಳಜಿ, ಬದ್ಧತೆ ನಮಗೆಲ್ಲ ಮಾದರಿ. ಈ ನಿಟ್ಟಿನಲ್ಲಿ ಈ ದಿವಸ ಏಕ ಬಳಕೆಯ ವಸ್ತುಗಳಾದ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಕಡ್ಡಿಗಳು, ದಿನ ಬಳಸುವ ಪ್ಲಾಸ್ಟಿಕ್ ವಸ್ತುಗಳಾದ ಲೋಟ, ಚೂರಿಗಳು, ಪ್ಯಾಕಿಂಗ್ ಗೆ ಬಳಸುವ ರ್ಯಾಪರ್, ಪ್ಲಾಸ್ಟಿಕ್ ಆಹ್ವಾನ ಪತ್ರಿಕೆ, ಪ್ಲಾಸ್ಟಿಕ್ ಹಾಗೂ ಪಿವಿಸಿ ಬ್ಯಾನರ್ಗಳು ಮೊದಲಾದವುಗಳನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದರು.
ದೇಶದಾದ್ಯಂತ ಏಕ‌ಬಳಕೆಯ ಪ್ಲಾಸ್ಟಿಕ್ ನಿಷೇಧ ಹೇರಲಾಗಿದ್ದು , ಕರ್ನಾಟಕ ಸರ್ಕಾರವು 2016 ರಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದೆ. ಇವತ್ತಿನ ಪ್ಲಾಸ್ಟಿಕ್ ನಿಷೇಧ ರಾಜ್ಯಕ್ಕೆ ಮೊದಲು ಹಾಗೂ ಮಾದರಿ ಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಸಸ್ನ ಭಕ್ತ, ಸ್ಥಳೀಯ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಐಇಸಿ ತಜ್ಞ ಡೊಂಬಯ್ಯ ಇಡ್ಕಿದು, ಎಚ್.ಆರ್.ಡಿ ನವೀನ್ , ಜಲ್ ಜೀವನ್ ಮಿಷನ್ ನ ವಿಘ್ನೇಶ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು