6:21 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ

03/10/2023, 13:27

ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ತರಲಾಗಿದ್ದು, ಅ.2ರ ಸೋಮವಾರ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿಜೀ ಪ್ರತಿಮೆಗೆ ಪುಷ್ಪಾರ್ಚಾಣೆ ಮಾಡಿ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗಡೆ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.


ಗಾಂಧಿಯವರ ವಿಚಾರಧಾರೆ ಎಂದಿಗೂ ಸಾರ್ವಕಾಲಿಕ. ಸ್ವಚ್ಛತೆ ಬಗೆಗಿದ್ದ ಕಾಳಜಿ, ಬದ್ಧತೆ ನಮಗೆಲ್ಲ ಮಾದರಿ. ಈ ನಿಟ್ಟಿನಲ್ಲಿ ಈ ದಿವಸ ಏಕ ಬಳಕೆಯ ವಸ್ತುಗಳಾದ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಕಡ್ಡಿಗಳು, ದಿನ ಬಳಸುವ ಪ್ಲಾಸ್ಟಿಕ್ ವಸ್ತುಗಳಾದ ಲೋಟ, ಚೂರಿಗಳು, ಪ್ಯಾಕಿಂಗ್ ಗೆ ಬಳಸುವ ರ್ಯಾಪರ್, ಪ್ಲಾಸ್ಟಿಕ್ ಆಹ್ವಾನ ಪತ್ರಿಕೆ, ಪ್ಲಾಸ್ಟಿಕ್ ಹಾಗೂ ಪಿವಿಸಿ ಬ್ಯಾನರ್ಗಳು ಮೊದಲಾದವುಗಳನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದರು.
ದೇಶದಾದ್ಯಂತ ಏಕ‌ಬಳಕೆಯ ಪ್ಲಾಸ್ಟಿಕ್ ನಿಷೇಧ ಹೇರಲಾಗಿದ್ದು , ಕರ್ನಾಟಕ ಸರ್ಕಾರವು 2016 ರಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದೆ. ಇವತ್ತಿನ ಪ್ಲಾಸ್ಟಿಕ್ ನಿಷೇಧ ರಾಜ್ಯಕ್ಕೆ ಮೊದಲು ಹಾಗೂ ಮಾದರಿ ಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಸಸ್ನ ಭಕ್ತ, ಸ್ಥಳೀಯ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಐಇಸಿ ತಜ್ಞ ಡೊಂಬಯ್ಯ ಇಡ್ಕಿದು, ಎಚ್.ಆರ್.ಡಿ ನವೀನ್ , ಜಲ್ ಜೀವನ್ ಮಿಷನ್ ನ ವಿಘ್ನೇಶ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು