9:40 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನೇಪಾಳದಲ್ಲಿ ಪ್ರಬಲ ಭೂಕಂಪ: ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಭೂಕಂಪನ

03/10/2023, 16:44

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ.
ನೇಪಾಳದಲ್ಲಿ ಎರಡು ಭೂಕಂಪಗಳ ನಂತರ ಇಂದು ದೆಹಲಿಯಲ್ಲಿ ಭಾರೀ ಕಂಪನಗಳು ಸಂಭವಿಸಿವೆ . ಒಂದು ರಿಕ್ಟರ್ ಮಾಪಕದಲ್ಲಿ 4.6 ಮತ್ತು ಇನ್ನೊಂದು 6.2 ದಾಖಲಾಗಿದೆ. ಭೂಮಿಯಲ್ಲಿ
5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ. ನೇಪಾಳದಲ್ಲಿ ಮೊದಲ ಭೂಕಂಪ ಮಧ್ಯಾಹ್ನ 2:25 ಕ್ಕೆ ಸಂಭವಿಸಿತು, ಎರಡನೆಯದು ಮಧ್ಯಾಹ್ನ 2:51ಕ್ಕೆ ನಡೆಯಿತು.
“ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2 ದಾಖಲಾಗಿದೆ. ಇದು 5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಹೇಳಿಕೆಯಲ್ಲಿ ತಿಳಿಸಿದೆ.
ಹಾಗೆ ದೆಹಲಿ ಮತ್ತು ಇತರ ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ. ಉತ್ತರ ಪ್ರದೇಶದ ಲಕ್ನೋ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ನೇಪಾಳದಲ್ಲಿ ಸಂಭವಿಸಿದ ಭೂಕಂಪಗಳ ನಂತರ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನಗಳು ಸಂಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು