6:17 AM Monday21 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ: ಚಿಲುವೆ ಸಂಸ್ಥೆ ವಿರುದ್ಧ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

03/10/2023, 17:52

ಬೆಂಗಳೂರು(reporterkarnataka.com): ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ ಹೊತ್ತಿರುವ ಚಿಲುಮೆ ಸಂಸ್ಥೆ ಇದೀಗ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಲುಮೆ ಎಂಬ ಸಂಸ್ಥೆಯು ಮತದಾರರ ಜಾಗೃತಿ ಹಾಗೂ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಸಂಗ್ರಹ ಮಾಡಿದೆ ಎಂಬ ಆರೋಪವಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಕ್ಕೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಅವರು ತನಿಖೆ ನಡೆಸುವಂತೆ ಕೋರಿದ್ದರು. ಈ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಸಿ, ವಿವರವಾದ ವರದಿ ಸಲ್ಲಿಸುವಂತೆ ಸಿಎಂ ಸೂಚಿಸಿದ್ದಾರೆ.
ಬಿಬಿಎಂಪಿಯಿಂದ ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಎಂದು ಗುರುತಿನ ಚೀಟಿ ಹಾಕಿಕೊಂಡು ಈ ಅಕ್ರಮ ಎಸೆಯಲಾಗಿದೆ. ಈ ಅಕ್ರಮದ ಹಿಂದೆ ಸಚಿವರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು