2:29 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ಮದರ್ ವೆರೋನಿಕಾ ದ್ವಿಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರ

04/10/2023, 14:27

ಬಂಟ್ವಾಳ(reporterkarnataka.com): ಅಪೊಸ್ತೋಲಿಕ್ ಕಾರ್ಮೆಲ್ ಸಂಸ್ಥಾಪಕಿ ಮದರ್ ವೆರೋನಿಕಾ ಇವರ ದ್ವಿ ಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರವನ್ನು ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಕಾರ್ಮೆಲ್ ಕಾಲೇಜ್ ಮೊಡಂಕಾಪು , ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್, ಮಂಗಳೂರು, ಇನ್ಫ್ಯಾಂಟ್ ಜೀಸಸ್ ಚರ್ಚ್ ಮೊಡಂಕಾಪು, ಕ್ರಿಸ್ಟೊಫರ್ ಅಸೋಸಿಯೇಷನ್, ಆರೋಗ್ಯ ಆಯೋಗ ಇನ್ಫ್ಯಾಂಟ್ ಜೀಸಸ್ ಚರ್ಚ್, ಐಸಿವೈಮ್ ಹಾಗೂ ಸ್ತ್ರೀ ಸಂಘಟನೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾಯಿತು.


ಸಭಾ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳಾಗಿ ಅತೀ ವಂದನೀಯ ವೆಲೇರಿಯನ್ ಡಿ’ಸೋಜ (ಧರ್ಮ ಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್ ಮೊಡಂಕಾಪು), ಚರ್ಚ್ ಪಾಲನ ಮಂಡಳಿಯ ಸುನಿಲ್ ವೇಗಸ್ ಹಾಗೂ ಕಾರ್ಯದರ್ಶಿ ಮನೋಹರ್ ಡಿ’ ಕೊಸ್ತಾ, ಡಾ| ಚಾರು, (ವೈದ್ಯರು ಫಾ| ಮುಲ್ಲರ್ ಆಸ್ಪತ್ರೆ), ಐವನ್ ಡಿ’ಸೋಜ(ಅಧ್ಯಕ್ಷರು ಕ್ರಿಸ್ಟೊಫರ್ ಅಸೋಸಿಯೇಷನ್), ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಸಂಚಾಲಕರಾದ ಏಲೋಶಿಯಸ್ ಹಾಗೂ ಐಸಿವೈಮ್ ನ ಸಂಚಾಲಕಿ ಪ್ರೀಮ, ಕಾರ್ಮೆಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು|ನವೀನ ಎ. ಸಿ. ಮತ್ತು ಡಾ. ಲತಾ ಫೆ ರ್ನಾಂಡಿಸ್ ಎ ಸಿ. (ಪ್ರಾಂಶುಪಾಲರು ಕಾರ್ಮೆಲ್ ಡಿಗ್ರಿ ಕಾಲೇಜ್ ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅತೀ ವಂದನೀಯ
ವೆಲೇರಿಯನ್ ಡಿ’ಸೋಜ ಧರ್ಮ ಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್ ಮೊಡಂಕಾಪು, ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು. ಸಭಾ ಕಾರ್ಯಕ್ರಮದ ನಂತರ ರಕ್ತದಾನ ಶಿಬಿರ ಪ್ರಾರಂಭಗೊಂಡಿತು. 50 ಯುನಿಟ್ ರಕ್ತ ಪಡೆದುಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ನಿರೂಪಣೆಯನ್ನು ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜ್ ಮೊಡಂಕಾಪು) ಮಾಡಿದರು. ರೊಸಿಲ್ಡ್ (ಕಾರ್ಮೆಲ್ ಕಾನ್ವೆಂಟ್ ನ ಸುಪೀರಿಯರ್ ಹಾಗೂ ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾ ಸಂಸ್ಥೆಗಳು) ಸ್ವಾಗತಿಸಿದರು.
ನವೀನ ಎ.ಸಿ (ಪ್ರಾಂಶುಪಾಲರು, ಕಾರ್ಮೆಲ್ ಪದವಿ ಪೂರ್ವ ಕಾಲೇಜು) ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು