12:48 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ನಿವೃತ್ತರಾದ ಅಬ್ದುಲ್ ಖಾದರ್ ಅವರಿಗೆ ಬೀಳ್ಕೊಡುಗೆ

04/10/2023, 17:42

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿ ವತಿಯಿಂದ ಸಹಾಯಕ ಕಾರ್ಯ ಪಾಲಕ ಅಭಿಯಂತರರಾಗಿ ನಿವೃತ್ತಿ ಹೊಂದಿದ ಅಬ್ದುಲ್ ಖಾದರ್ ಡಿ. ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಸುರತ್ಕಲ್ ಲಯನ್ ಸೇವಾ ಮಂದಿರದಲ್ಲಿ ಏರ್ಪಡಿಸಲಾಯಿತು.



ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಲ್ಲಿ ತನ್ನ ಸೇವೆಯನ್ನು ಆರಂಭಿಸಿದ ಖಾದರ್ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ 21 ವರ್ಷ ಕರ್ತವ್ಯ ನಿರ್ವಹಿಸಿದ್ದರು.
ಒಟ್ಟು 33 ವರ್ಷಗಳ ಕಾಲ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಸೆ. 30ರಂದು ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶ ಆನಂದ್ ಎಲ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರರು ( ಅಭಿವೃದ್ಧಿ ) ಮಹೇಶ್, ಕಾರ್ಯಪಾಲಕ ಅಭಿಯಂತರರಾದ ನರೇಶ್ ಶೆಣೈ, ಗುತ್ತಿಗೆದಾರರಾದ ಎಂ. ಜಿ. ಹುಸೇನ್ ಉಪಸ್ಥಿತರಿದ್ದರು. ಮಹಾನಗರ ಪಾಲಿಕೆಯ ಆಯುಕ್ತರು ಬೀಳ್ಕೊಡುಗೆ ಸಮಾರಂಭ ನಡೆಸಿಕೊಟ್ಟರು. ಕಾರ್ಯಪಾಲಕ ಅಭಿಯಂತರರಾದ ನರೇಶ್ ಅವರು ನೀರಿನ ಸಮಸ್ಯೆ ಹಾಗೂ ಪಚ್ಚನಾಡಿ ಬೆಂಕಿ ಅನಾಹುತದಲ್ಲಿ ಖಾದರ್ ಅವರ ಮುತುವರ್ಜಿ ವಹಿಸಿ ಎಲ್ಲವನ್ನು ಸುಸೂತ್ರವಾಗಿ ನಡೆಸಿಕೊಟ್ಟಿದ್ದನ್ನು ಸ್ಮರಿಸಿದರು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಖಾದರ್ ಅವರು ತನ್ನ ಸೇವಾ ಅವಧಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರನ್ನು ಸ್ಮರಿಸಿದರು.
ಕಾರ್ಯಕ್ರಮವನ್ನು ಯಾದವ ಹೊಸಬೆಟ್ಟು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು