5:09 AM Monday28 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ನಿವೃತ್ತರಾದ ಅಬ್ದುಲ್ ಖಾದರ್ ಅವರಿಗೆ ಬೀಳ್ಕೊಡುಗೆ

04/10/2023, 17:42

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿ ವತಿಯಿಂದ ಸಹಾಯಕ ಕಾರ್ಯ ಪಾಲಕ ಅಭಿಯಂತರರಾಗಿ ನಿವೃತ್ತಿ ಹೊಂದಿದ ಅಬ್ದುಲ್ ಖಾದರ್ ಡಿ. ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಸುರತ್ಕಲ್ ಲಯನ್ ಸೇವಾ ಮಂದಿರದಲ್ಲಿ ಏರ್ಪಡಿಸಲಾಯಿತು.



ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಲ್ಲಿ ತನ್ನ ಸೇವೆಯನ್ನು ಆರಂಭಿಸಿದ ಖಾದರ್ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ 21 ವರ್ಷ ಕರ್ತವ್ಯ ನಿರ್ವಹಿಸಿದ್ದರು.
ಒಟ್ಟು 33 ವರ್ಷಗಳ ಕಾಲ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಸೆ. 30ರಂದು ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶ ಆನಂದ್ ಎಲ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರರು ( ಅಭಿವೃದ್ಧಿ ) ಮಹೇಶ್, ಕಾರ್ಯಪಾಲಕ ಅಭಿಯಂತರರಾದ ನರೇಶ್ ಶೆಣೈ, ಗುತ್ತಿಗೆದಾರರಾದ ಎಂ. ಜಿ. ಹುಸೇನ್ ಉಪಸ್ಥಿತರಿದ್ದರು. ಮಹಾನಗರ ಪಾಲಿಕೆಯ ಆಯುಕ್ತರು ಬೀಳ್ಕೊಡುಗೆ ಸಮಾರಂಭ ನಡೆಸಿಕೊಟ್ಟರು. ಕಾರ್ಯಪಾಲಕ ಅಭಿಯಂತರರಾದ ನರೇಶ್ ಅವರು ನೀರಿನ ಸಮಸ್ಯೆ ಹಾಗೂ ಪಚ್ಚನಾಡಿ ಬೆಂಕಿ ಅನಾಹುತದಲ್ಲಿ ಖಾದರ್ ಅವರ ಮುತುವರ್ಜಿ ವಹಿಸಿ ಎಲ್ಲವನ್ನು ಸುಸೂತ್ರವಾಗಿ ನಡೆಸಿಕೊಟ್ಟಿದ್ದನ್ನು ಸ್ಮರಿಸಿದರು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಖಾದರ್ ಅವರು ತನ್ನ ಸೇವಾ ಅವಧಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರನ್ನು ಸ್ಮರಿಸಿದರು.
ಕಾರ್ಯಕ್ರಮವನ್ನು ಯಾದವ ಹೊಸಬೆಟ್ಟು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು