2:15 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕದ್ರಿಕಂಬಳ: ವೃದ್ಧ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ

04/10/2023, 18:18

ಮಂಗಳೂರು(reporterkarnataka.com): ಕದ್ರಿಕಂಬಳ ಬಳಿ ಮನೆಯೊಂದರಲ್ಲಿ ಇಬ್ಬರು ವೃದ್ಧ ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಿರುವ ಜಗನ್ನಾಥ್ ಭಂಡಾರಿ(78) ಎಂಬವರ ಪತ್ನಿ ಲತಾ ಭಂಡಾರಿ (70) ಹಾಗೂ ಲತಾ ಭಂಡಾರಿ ಅವರ ಅಕ್ಕ ಸುಂದರಿ ಶೆಟ್ಟಿ (80) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ತಿಳಿದು ಬಂದಿದೆ.
ಜಗನ್ನಾಥ್ ಭಂಡಾರಿ ಅವರು ಎಂದಿನಂತೆ ಮಂಗಳೂರಿನ ಯಶ್ ರಾಜ್ ಬಾರಿಗೆ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆ ಮನೆಗೆ ಬಂದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ಒಳಗೆ ನೋಡಿದಾಗ ಲತಾ ಭಂಡಾರಿ ಹಾಗೂ ಸುಂದರಿ ಭಂಡಾರಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದರು ಎಂದು ತಿಳಿದು ಬಂದಿದೆ.
ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು