7:15 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಕದ್ರಿಕಂಬಳ: ವೃದ್ಧ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ

04/10/2023, 18:18

ಮಂಗಳೂರು(reporterkarnataka.com): ಕದ್ರಿಕಂಬಳ ಬಳಿ ಮನೆಯೊಂದರಲ್ಲಿ ಇಬ್ಬರು ವೃದ್ಧ ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಿರುವ ಜಗನ್ನಾಥ್ ಭಂಡಾರಿ(78) ಎಂಬವರ ಪತ್ನಿ ಲತಾ ಭಂಡಾರಿ (70) ಹಾಗೂ ಲತಾ ಭಂಡಾರಿ ಅವರ ಅಕ್ಕ ಸುಂದರಿ ಶೆಟ್ಟಿ (80) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ತಿಳಿದು ಬಂದಿದೆ.
ಜಗನ್ನಾಥ್ ಭಂಡಾರಿ ಅವರು ಎಂದಿನಂತೆ ಮಂಗಳೂರಿನ ಯಶ್ ರಾಜ್ ಬಾರಿಗೆ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆ ಮನೆಗೆ ಬಂದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ಒಳಗೆ ನೋಡಿದಾಗ ಲತಾ ಭಂಡಾರಿ ಹಾಗೂ ಸುಂದರಿ ಭಂಡಾರಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದರು ಎಂದು ತಿಳಿದು ಬಂದಿದೆ.
ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು