3:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಜೆಡಿಎಸ್ ಗೆ 3 ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಚಿಂತನೆ; ಗೌಡ್ರು ಒಪ್ಪಿಕೊಂಡ್ರೆ ಒಂದೆರಡು ದಿನಗಳಲ್ಲಿ ಸಖ್ಯ ಪಕ್ಕಾ

05/10/2023, 10:25

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲವೂ ಅಂದುಕೊಂಡಂತೆ ನಡೆದರೆ ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೆರಡು ದಿನಗಳಲ್ಲಿ ಪಕ್ಕಾ ಆಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಮೈತ್ರಿ ಸೂತ್ರವನ್ನು ಬಿಜೆಪಿಯು ಜೆಡಿಎಸ್ ಮುಂದಿಟ್ಟಿದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಈ ಮೈತ್ರಿ ಸೂತ್ರವನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರ ಮುಂದಿಟ್ಟಿದ್ದಾರೆ. ದೇವೇಗೌಡರ ತವರು ಜಿಲ್ಲೆಯಾದ ಹಾಸನ ಲೋಕಸಭಾ ಕ್ಷೇತ್ರದ ಜತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಸಿದ್ಧವಾಗಿದೆ. ಬಿಜೆಪಿಯ ಈ ಆಫರನ್ನು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಒಪ್ಪಿಕೊಂಡರೆ ಒಂದೆರಡು ದಿನಗಳಲ್ಲಿ ಉಭಯ ಪಕ್ಷಗಳ ಮೈತ್ರಿಗೆ ಅಧಿಕೃತ ಮುದ್ರೆ ಬೀಳಲಿದೆ. ಕೇವಲ 3 ಕ್ಷೇತ್ರಗಳನ್ನು ಜೆಡಿಎಸ್ ಒಪ್ಪಿಕೊಳ್ಳದಿದ್ದರೆ, ಬಿಜೆಪಿಯು ಜೆಡಿಎಸ್ ಗೆ
ಜೆ.ಪಿ. ನಡ್ಡಾ, ಅಮಿತ್ ಷಾ ಅವರ ಜತೆ ಮತ್ತೊಂದು ಸುತ್ತಿನ ಮಾತುಕತೆಗೆ ಅವಕಾಶ ನೀಡಲಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಹಿನ್ನಡೆ ಕಂಡ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಈಗಾಗಲೇ ಜೆಡಿಎಸ್ ಸಿದ್ಧತೆಯಲ್ಲಿ ತೊಡಗಿದೆ. ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ದೇವೇಗೌಡರ ದೆಹಲಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವುದರಿಂದ ಜೆಡಿಎಸ್ ಗೆ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುವುದು ಕಷ್ಟಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯಾವುದೇ ತಕರಾರು ಮಾಡದೆ ಬಿಜೆಪಿ ನೀಡುವ 3 ಕ್ಷೇತ್ರಗಳನ್ನು ಒಪ್ಪಿಕೊಂಡು ಮೈತ್ರಿಗೆ ಅಂತಿಮ ಮುದ್ರೆಯೊತ್ತುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು