7:02 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ತುಂಬಾ ಸೆಂಟಿಮೆಂಟಲ್ ಕಣ್ರೀ ನಮ್ಮ ಸಿಎಂ: ಮುದ್ದಿನ ನಾಯಿ ಸತ್ತಾಗ ಕಣ್ಣೀರಿಟ್ಟ ಬೊಮ್ಮಾಯಿ !

28/07/2021, 21:07

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಣ್ಣೀರಿಟ್ಟ ಘಟನೆ ನಡೆದಿತ್ತು. ಸಿಎಂ ಆಗುವ ಕೇವಲ ಒಂದು ವಾರದ ಮುನ್ನ ಬೊಮ್ಮಾಯಿ ಅವರು ದುಃಖ ತಾಳಲಾಗದೆ ಕರ್ಚೀಫನ್ನು ಕಣ್ಣಿಗೆ ಒತ್ತಿಕೊಂಡಿದ್ದರು. ತನ್ನ ಕುಟುಂಬದ ಸದಸ್ಯರ ಎದುರೇ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು.


ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದಲ್ಲೇ ಈ ಘಟನೆ ನಡೆದಿತ್ತು. ಇವೆಲ್ಲ ನಡೆದಾಗ ಅವರು ಗೃಹ ಸಚಿವರಾಗಿದ್ದರು. ಅವರು ಸಾಕಿ ಸಲಹಿದ ಮುದ್ದಿನ ನಾಯಿ ಮೃತಪಟ್ಟಾಗ ಅವರು ದುಃಖ ತಾಳಲಾಗದೆ ಕಣ್ಣೀರು ಹಾಕಿದ್ದರು. ಈ ಕುರಿತು ವೀಡಿಯೊವೊಂದು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ವೈರಲ್ ಆಗಿದೆ. ಮುದ್ದಿನ ನಾಯಿಗೆ ಅಂತಿಮ ವಿದಾಯ ಹೇಳುವಾಗ ಬೊಮ್ಮಾಯಿ ಜತೆ ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ವಾನದ ಮೃತದೇಹದ ಮೇಲೆ ಹೂವಿನ ಹಾರ ಹಾಕಲಾಗಿತ್ತು.

ಬೊಮ್ಮಾಯಿ ಅವರು ನೆಲದಲ್ಲಿ ಮಂಡಿಯೂರಿ ಬಾಗಿ ಶ್ವಾನಕ್ಕೆ ಅಂತಿಮ ಮುತ್ತು ನೀಡಿದ್ದರು. ನಂತರ ದುಃಖ ತಾಳಲಾಗದೆ ಕಂಗಳನ್ನು ಕರ್ಚೀಫ್ ನಲ್ಲಿ ಒರಸಿಕೊಂಡರು. ಮುಖ್ಯಮಂತ್ರಿಯವರ ಪ್ರಾಣಿ ಪ್ರೇಮಕ್ಕೆ ಹಾಟ್ಸಾಪ್. 

ಇತ್ತೀಚಿನ ಸುದ್ದಿ

ಜಾಹೀರಾತು