4:18 AM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ತುಂಬಾ ಸೆಂಟಿಮೆಂಟಲ್ ಕಣ್ರೀ ನಮ್ಮ ಸಿಎಂ: ಮುದ್ದಿನ ನಾಯಿ ಸತ್ತಾಗ ಕಣ್ಣೀರಿಟ್ಟ ಬೊಮ್ಮಾಯಿ !

28/07/2021, 21:07

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಣ್ಣೀರಿಟ್ಟ ಘಟನೆ ನಡೆದಿತ್ತು. ಸಿಎಂ ಆಗುವ ಕೇವಲ ಒಂದು ವಾರದ ಮುನ್ನ ಬೊಮ್ಮಾಯಿ ಅವರು ದುಃಖ ತಾಳಲಾಗದೆ ಕರ್ಚೀಫನ್ನು ಕಣ್ಣಿಗೆ ಒತ್ತಿಕೊಂಡಿದ್ದರು. ತನ್ನ ಕುಟುಂಬದ ಸದಸ್ಯರ ಎದುರೇ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು.


ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದಲ್ಲೇ ಈ ಘಟನೆ ನಡೆದಿತ್ತು. ಇವೆಲ್ಲ ನಡೆದಾಗ ಅವರು ಗೃಹ ಸಚಿವರಾಗಿದ್ದರು. ಅವರು ಸಾಕಿ ಸಲಹಿದ ಮುದ್ದಿನ ನಾಯಿ ಮೃತಪಟ್ಟಾಗ ಅವರು ದುಃಖ ತಾಳಲಾಗದೆ ಕಣ್ಣೀರು ಹಾಕಿದ್ದರು. ಈ ಕುರಿತು ವೀಡಿಯೊವೊಂದು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ವೈರಲ್ ಆಗಿದೆ. ಮುದ್ದಿನ ನಾಯಿಗೆ ಅಂತಿಮ ವಿದಾಯ ಹೇಳುವಾಗ ಬೊಮ್ಮಾಯಿ ಜತೆ ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ವಾನದ ಮೃತದೇಹದ ಮೇಲೆ ಹೂವಿನ ಹಾರ ಹಾಕಲಾಗಿತ್ತು.

ಬೊಮ್ಮಾಯಿ ಅವರು ನೆಲದಲ್ಲಿ ಮಂಡಿಯೂರಿ ಬಾಗಿ ಶ್ವಾನಕ್ಕೆ ಅಂತಿಮ ಮುತ್ತು ನೀಡಿದ್ದರು. ನಂತರ ದುಃಖ ತಾಳಲಾಗದೆ ಕಂಗಳನ್ನು ಕರ್ಚೀಫ್ ನಲ್ಲಿ ಒರಸಿಕೊಂಡರು. ಮುಖ್ಯಮಂತ್ರಿಯವರ ಪ್ರಾಣಿ ಪ್ರೇಮಕ್ಕೆ ಹಾಟ್ಸಾಪ್. 

ಇತ್ತೀಚಿನ ಸುದ್ದಿ

ಜಾಹೀರಾತು