7:07 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ತುಂಬಾ ಸೆಂಟಿಮೆಂಟಲ್ ಕಣ್ರೀ ನಮ್ಮ ಸಿಎಂ: ಮುದ್ದಿನ ನಾಯಿ ಸತ್ತಾಗ ಕಣ್ಣೀರಿಟ್ಟ ಬೊಮ್ಮಾಯಿ !

28/07/2021, 21:07

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಣ್ಣೀರಿಟ್ಟ ಘಟನೆ ನಡೆದಿತ್ತು. ಸಿಎಂ ಆಗುವ ಕೇವಲ ಒಂದು ವಾರದ ಮುನ್ನ ಬೊಮ್ಮಾಯಿ ಅವರು ದುಃಖ ತಾಳಲಾಗದೆ ಕರ್ಚೀಫನ್ನು ಕಣ್ಣಿಗೆ ಒತ್ತಿಕೊಂಡಿದ್ದರು. ತನ್ನ ಕುಟುಂಬದ ಸದಸ್ಯರ ಎದುರೇ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು.


ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದಲ್ಲೇ ಈ ಘಟನೆ ನಡೆದಿತ್ತು. ಇವೆಲ್ಲ ನಡೆದಾಗ ಅವರು ಗೃಹ ಸಚಿವರಾಗಿದ್ದರು. ಅವರು ಸಾಕಿ ಸಲಹಿದ ಮುದ್ದಿನ ನಾಯಿ ಮೃತಪಟ್ಟಾಗ ಅವರು ದುಃಖ ತಾಳಲಾಗದೆ ಕಣ್ಣೀರು ಹಾಕಿದ್ದರು. ಈ ಕುರಿತು ವೀಡಿಯೊವೊಂದು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ವೈರಲ್ ಆಗಿದೆ. ಮುದ್ದಿನ ನಾಯಿಗೆ ಅಂತಿಮ ವಿದಾಯ ಹೇಳುವಾಗ ಬೊಮ್ಮಾಯಿ ಜತೆ ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ವಾನದ ಮೃತದೇಹದ ಮೇಲೆ ಹೂವಿನ ಹಾರ ಹಾಕಲಾಗಿತ್ತು.

ಬೊಮ್ಮಾಯಿ ಅವರು ನೆಲದಲ್ಲಿ ಮಂಡಿಯೂರಿ ಬಾಗಿ ಶ್ವಾನಕ್ಕೆ ಅಂತಿಮ ಮುತ್ತು ನೀಡಿದ್ದರು. ನಂತರ ದುಃಖ ತಾಳಲಾಗದೆ ಕಂಗಳನ್ನು ಕರ್ಚೀಫ್ ನಲ್ಲಿ ಒರಸಿಕೊಂಡರು. ಮುಖ್ಯಮಂತ್ರಿಯವರ ಪ್ರಾಣಿ ಪ್ರೇಮಕ್ಕೆ ಹಾಟ್ಸಾಪ್. 

ಇತ್ತೀಚಿನ ಸುದ್ದಿ

ಜಾಹೀರಾತು