3:29 AM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ತುಂಬಾ ಸೆಂಟಿಮೆಂಟಲ್ ಕಣ್ರೀ ನಮ್ಮ ಸಿಎಂ: ಮುದ್ದಿನ ನಾಯಿ ಸತ್ತಾಗ ಕಣ್ಣೀರಿಟ್ಟ ಬೊಮ್ಮಾಯಿ !

28/07/2021, 21:07

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಣ್ಣೀರಿಟ್ಟ ಘಟನೆ ನಡೆದಿತ್ತು. ಸಿಎಂ ಆಗುವ ಕೇವಲ ಒಂದು ವಾರದ ಮುನ್ನ ಬೊಮ್ಮಾಯಿ ಅವರು ದುಃಖ ತಾಳಲಾಗದೆ ಕರ್ಚೀಫನ್ನು ಕಣ್ಣಿಗೆ ಒತ್ತಿಕೊಂಡಿದ್ದರು. ತನ್ನ ಕುಟುಂಬದ ಸದಸ್ಯರ ಎದುರೇ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು.


ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದಲ್ಲೇ ಈ ಘಟನೆ ನಡೆದಿತ್ತು. ಇವೆಲ್ಲ ನಡೆದಾಗ ಅವರು ಗೃಹ ಸಚಿವರಾಗಿದ್ದರು. ಅವರು ಸಾಕಿ ಸಲಹಿದ ಮುದ್ದಿನ ನಾಯಿ ಮೃತಪಟ್ಟಾಗ ಅವರು ದುಃಖ ತಾಳಲಾಗದೆ ಕಣ್ಣೀರು ಹಾಕಿದ್ದರು. ಈ ಕುರಿತು ವೀಡಿಯೊವೊಂದು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ವೈರಲ್ ಆಗಿದೆ. ಮುದ್ದಿನ ನಾಯಿಗೆ ಅಂತಿಮ ವಿದಾಯ ಹೇಳುವಾಗ ಬೊಮ್ಮಾಯಿ ಜತೆ ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ವಾನದ ಮೃತದೇಹದ ಮೇಲೆ ಹೂವಿನ ಹಾರ ಹಾಕಲಾಗಿತ್ತು.

ಬೊಮ್ಮಾಯಿ ಅವರು ನೆಲದಲ್ಲಿ ಮಂಡಿಯೂರಿ ಬಾಗಿ ಶ್ವಾನಕ್ಕೆ ಅಂತಿಮ ಮುತ್ತು ನೀಡಿದ್ದರು. ನಂತರ ದುಃಖ ತಾಳಲಾಗದೆ ಕಂಗಳನ್ನು ಕರ್ಚೀಫ್ ನಲ್ಲಿ ಒರಸಿಕೊಂಡರು. ಮುಖ್ಯಮಂತ್ರಿಯವರ ಪ್ರಾಣಿ ಪ್ರೇಮಕ್ಕೆ ಹಾಟ್ಸಾಪ್. 

ಇತ್ತೀಚಿನ ಸುದ್ದಿ

ಜಾಹೀರಾತು