4:24 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

05/10/2023, 13:07

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು.
ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ ರಾಜ್ಯ ಸರಕಾರ ಕೊಡ ಮಾಡುವ 2022-23 ನೇ ಸಾಲಿನ “ಗಾಂಧಿ ಗ್ರಾಮ” ಪುರಸ್ಕಾರದ ಗರಿ ಲಿಂಗಸೂರು
ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯತ್ ಮುಡಿಗೇರಿಸಿಕೊಂಡ ಪ್ರಯುಕ್ತ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಪಂ ಅಧ್ಯಕ್ಷ ಸಿದ್ದಪ್ಪ , ಉಪಾಧ್ಯಕ್ಷ ರತ್ನಮ್ಮ,ಪಿಡಿಓ ಶಶಿಕಲಾ ಪಾಟೀಲ್ ಅವರಿಗೆ ಗ್ರಾಮಿಣಾಭಿವೃದ್ದಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯಡಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ನಿಟ್ಟಿನಲ್ಲಿ 2013-14ನೇ ಸಾಲಿನಿಂದ ಗ್ರಾಮ ಪಂಚಾಯತ ಸಾಧನೆಗಳಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ಗಳ ಮೂಲಕ ಮೌಲ್ಯಮಾಪನ ಮಾಡಿ,ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯತ್ ಗಳಲ್ಲಿ ಪ್ರಶಸ್ತಿಗಾಗಿ ಗೂಗಲ್ ತಂತ್ರಾಂಶದ ಮೂಲಕ ಅರ್ಜಿ ಸ್ವೀಕರಿಸಿ ಅವುಗಳಲ್ಲಿ ತಾಲೂಕೀಗೆ ಒಂದರಂತೆ ಗ್ರಾಮ ಪಂಚಾಯತ ಆಯ್ಕೆ ಮಾಡಿ, ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡುವ ಜೊತೆಗೆ 5.00 ಲಕ್ಷ ರೂ. ಪ್ರೋತ್ಸಾಹ ನೀಡಿ ಗೌರವಿಸಲಾಗುತ್ತದೆ.

ಪುರಸ್ಕಾರ ಖುಷಿ ತಂದಿದೆ : ಗಾಂಧಿ ಗ್ರಾಮ ಪುರಸ್ಕಾರ ಖುಷಿ ತಂದಿದೆ. ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನಾಗರಿಕರ ಸಹಕಾರದೊಂದಿಗೆ ಅನೇಕ ಅಭಿವೃದ್ದಿ ಕಾರ್ಯಗಳು ಕೈಗೊಂಡಿದ್ದು ,ಅಭಿವೃದ್ದಿ ಪಥದತ್ತ ಗ್ರಾಪಂ ಮುನ್ನಡೆಯುತ್ತಿದೆ. ಈ ನಡುವೆ ಪುರಸ್ಕಾರ ದೊರೆತಿದ್ದು ಮತ್ತಷ್ಟು ನಾವುಗಳು ಉತ್ಸಾಹದಿಂದ ಕೆಲಸ ಮಾಡಲು ಉತ್ತೆಜಿಸಿದಂತಾಗಿದೆ ಎಂದು ಗ್ರಾಪಂ ಪಿಡಿಒ
ಶಶಿಕಲಾ ಪಾಟೀಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು