4:48 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

05/10/2023, 13:07

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು.
ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ ರಾಜ್ಯ ಸರಕಾರ ಕೊಡ ಮಾಡುವ 2022-23 ನೇ ಸಾಲಿನ “ಗಾಂಧಿ ಗ್ರಾಮ” ಪುರಸ್ಕಾರದ ಗರಿ ಲಿಂಗಸೂರು
ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯತ್ ಮುಡಿಗೇರಿಸಿಕೊಂಡ ಪ್ರಯುಕ್ತ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಪಂ ಅಧ್ಯಕ್ಷ ಸಿದ್ದಪ್ಪ , ಉಪಾಧ್ಯಕ್ಷ ರತ್ನಮ್ಮ,ಪಿಡಿಓ ಶಶಿಕಲಾ ಪಾಟೀಲ್ ಅವರಿಗೆ ಗ್ರಾಮಿಣಾಭಿವೃದ್ದಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯಡಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ನಿಟ್ಟಿನಲ್ಲಿ 2013-14ನೇ ಸಾಲಿನಿಂದ ಗ್ರಾಮ ಪಂಚಾಯತ ಸಾಧನೆಗಳಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ಗಳ ಮೂಲಕ ಮೌಲ್ಯಮಾಪನ ಮಾಡಿ,ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯತ್ ಗಳಲ್ಲಿ ಪ್ರಶಸ್ತಿಗಾಗಿ ಗೂಗಲ್ ತಂತ್ರಾಂಶದ ಮೂಲಕ ಅರ್ಜಿ ಸ್ವೀಕರಿಸಿ ಅವುಗಳಲ್ಲಿ ತಾಲೂಕೀಗೆ ಒಂದರಂತೆ ಗ್ರಾಮ ಪಂಚಾಯತ ಆಯ್ಕೆ ಮಾಡಿ, ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡುವ ಜೊತೆಗೆ 5.00 ಲಕ್ಷ ರೂ. ಪ್ರೋತ್ಸಾಹ ನೀಡಿ ಗೌರವಿಸಲಾಗುತ್ತದೆ.

ಪುರಸ್ಕಾರ ಖುಷಿ ತಂದಿದೆ : ಗಾಂಧಿ ಗ್ರಾಮ ಪುರಸ್ಕಾರ ಖುಷಿ ತಂದಿದೆ. ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನಾಗರಿಕರ ಸಹಕಾರದೊಂದಿಗೆ ಅನೇಕ ಅಭಿವೃದ್ದಿ ಕಾರ್ಯಗಳು ಕೈಗೊಂಡಿದ್ದು ,ಅಭಿವೃದ್ದಿ ಪಥದತ್ತ ಗ್ರಾಪಂ ಮುನ್ನಡೆಯುತ್ತಿದೆ. ಈ ನಡುವೆ ಪುರಸ್ಕಾರ ದೊರೆತಿದ್ದು ಮತ್ತಷ್ಟು ನಾವುಗಳು ಉತ್ಸಾಹದಿಂದ ಕೆಲಸ ಮಾಡಲು ಉತ್ತೆಜಿಸಿದಂತಾಗಿದೆ ಎಂದು ಗ್ರಾಪಂ ಪಿಡಿಒ
ಶಶಿಕಲಾ ಪಾಟೀಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು