12:57 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ: ಜನಪರ ಹೋರಾಟದ ಭರವಸೆ

05/10/2023, 21:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):
ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು.


ನಿಕಟಪೂರ್ವ ಪ್ರತಿಪಕ್ಷ ನಾಯಕ ನವೀನ್ ಡಿಸೋಜ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆ.ಆರ್. ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೋ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಚುನಾವಣೆಯ ಸಂದರ್ಭ 44ಕ್ಕೂ ಹೆಚ್ಚು ಸದಸ್ಯರನ್ನು ಆರಿಸಿ ಕಳಿಸುತ್ತೇವೆ.


ಪ್ರವೀಣ್ ಚಂದ್ರ ಆಳ್ವ ಅವರು ವಿಪಕ್ಷ ನಾಯಕನಾಗಿ ಬಿಜೆಪಿಯ ದುರಾಡಳಿತದ ವಿರುದ್ಧ ಎಚ್ಚರಿಸುವ ಹಾಗೂ ಜನಪರ ಸಮರ್ಥ ಹೋರಾಟವನ್ನು ನಡೆಸುವ ಭರವಸೆ ಇದೆ ಎಂದು ನುಡಿದರು.
ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು.
ಬಿಜೆಪಿಯ ತಪ್ಪುಗಳನ್ನ ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಹಾರಿಸಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.








ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು. ಕಾಂಗ್ರೆಸ್ ನಾಯಕ ಮಿಥುನ್ ರೈ,
ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್, ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್,
ಟಿ.ಕೆ ಸುಧೀರ್, ಪದ್ಮರಾಜ್ ಆರ್., ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್, ಶಾಲೆಟ್ ಪಿಂಟೋ, ಮಮತಾ ಗಟ್ಟಿ,ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ,ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು