10:20 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ: ಜನಪರ ಹೋರಾಟದ ಭರವಸೆ

05/10/2023, 21:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):
ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು.


ನಿಕಟಪೂರ್ವ ಪ್ರತಿಪಕ್ಷ ನಾಯಕ ನವೀನ್ ಡಿಸೋಜ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆ.ಆರ್. ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೋ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಚುನಾವಣೆಯ ಸಂದರ್ಭ 44ಕ್ಕೂ ಹೆಚ್ಚು ಸದಸ್ಯರನ್ನು ಆರಿಸಿ ಕಳಿಸುತ್ತೇವೆ.


ಪ್ರವೀಣ್ ಚಂದ್ರ ಆಳ್ವ ಅವರು ವಿಪಕ್ಷ ನಾಯಕನಾಗಿ ಬಿಜೆಪಿಯ ದುರಾಡಳಿತದ ವಿರುದ್ಧ ಎಚ್ಚರಿಸುವ ಹಾಗೂ ಜನಪರ ಸಮರ್ಥ ಹೋರಾಟವನ್ನು ನಡೆಸುವ ಭರವಸೆ ಇದೆ ಎಂದು ನುಡಿದರು.
ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು.
ಬಿಜೆಪಿಯ ತಪ್ಪುಗಳನ್ನ ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಹಾರಿಸಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.








ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು. ಕಾಂಗ್ರೆಸ್ ನಾಯಕ ಮಿಥುನ್ ರೈ,
ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್, ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್,
ಟಿ.ಕೆ ಸುಧೀರ್, ಪದ್ಮರಾಜ್ ಆರ್., ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್, ಶಾಲೆಟ್ ಪಿಂಟೋ, ಮಮತಾ ಗಟ್ಟಿ,ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ,ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು