9:02 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು