11:36 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ: ಸುಮಾರು 7 ಕೋಟಿ ವೆಚ್ಚದ ಯೋಜನೆ

05/10/2023, 21:47

ಬಂಟ್ವಾಳ(reporterkarnataka.com): ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋಟಿ ರೂ.ವೆಚ್ಚದಲ್ಲಿ ಭರದಿಂದ ನಡೆಯುತ್ತಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ.
ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮಂಟಪದ ಮೇಲ್ಛಾವಣಿಗೆ ತಾಮ್ರದ ಹೊದಿಕೆಯ ಕಾರ್ಯ ಪೂರ್ಣಗೊಂಡಿದ್ದು, 2024ರ ಜ. 17ರಿಂದ 25ರವರೆಗೆ ಕ್ಷೇತ್ರದ ಬ್ರಹ್ಮಕಲಶೋತ್ಸವ ನೆರವೇರಲಿದೆ.
ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಆಗಮ ಶಾಸ್ತ್ರಕ್ಕೆ ಪೂರಕವಾಗಿ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಸುಮಾರು 2.5 ಕೋ.ರೂ.ಗಳ ಕಾಮಗಾರಿಗಳು ಪೂರ್ಣಗೊಂಡಿದೆ. ಸುತ್ತಪೌಳಿಯ ಶಿಲಾಮಯ ಗೋಡೆಗಳು ಬಹುತೇಕ ಪೂರ್ಣಗೊಂಡಿದ್ದು, ಮೇಲ್ಛಾವಣಿಯ ದಾರುಶಿಲ್ಪದ ಕಾರ್ಯ ಪ್ರಗತಿಯಲ್ಲಿದೆ.

ಧ್ವಜಸ್ತಂಭದ ತೈಲಾಧಿವಾಸ ನಡೆದಿದ್ದು, ಪ್ರಸ್ತುತ ಪ್ರತಿನಿತ್ಯವೂ ಭಕ್ತರು ಎಳ್ಳೆಣ್ಣೆ ಸಮರ್ಪಿಸುತ್ತಿದ್ದಾರೆ. ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ತಾಮ್ರದ ಹೊದಿಕೆಗೆ ಪ್ರತಿ ಮನೆಯ ಭಕ್ತರ ಸೇವೆ ಸಂದಾಯವಾಗಬೇಕು ಎನ್ನುವ ನಿಟ್ಟಿನಲ್ಲಿ ಕೂಪನ್‌ಗಳನ್ನು ನೀಡಲಾಗಿದ್ದು, ಜತೆಗೆ ಸ್ವರ್ಣಲೇಪಿತ ಪ್ರಧಾನ ಕಲಶಕ್ಕೂ ಪ್ರತಿ ಭಕ್ತರ ಸೇವೆಯ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಪ್ರತ್ಯೇಕ ಕಾಣಿಕೆ ಡಬ್ಬಿಯನ್ನಿಟ್ಟು ಭಕ್ತರ ಇಚ್ಛಾನುಸಾರ ಕಾಣಿಕೆ ನೀಡಲು ಜೀರ್ಣೊದ್ಧಾರ ಸಮಿತಿ ಅವಕಾಶ ಕಲ್ಪಿಸಿದೆ.
ಮುಂದಿನ ದಿನಗಳಲ್ಲಿ ಹನುಮಂತ ದೇವರ ಗುಡಿ, ನಾಗದೇವರ ಬನ, ಪರಿವಾರ ದೈವಗಳ ಗುಡಿಗಳು, ವಸಂತ ಮಂಟಪ ಮೊದಲಾದ ಕಾಮಗಾರಿಗಳು ಶೀಘ್ರ ಪ್ರಾರಂಭಗೊಳ್ಳಲಿದೆ. ವಾಸ್ತು ಶಿಲ್ಪಿ ಮಹೇಶ್ ಮುನಿಯಂಗಳ ಅವರ ನೇತೃತ್ವದಲ್ಲಿ ವಾಸುಶಿಲ್ಪದ ಕೆಲಸಗಳು ನಡೆಯುತ್ತಿದ್ದು, ಸಂಸದರು, ಶಾಸಕರು, ಮಾಜಿ ಸಚಿವರು, ಹಲ್ಸನಾಡು ಮನೆತನದ ಧನಿಗಳ ಗೌರವಾಧ್ಯಕ್ಷೆಯ ಜೀರ್ಣೋದ್ಧಾರ ಸಮಿತಿಯಲ್ಲಿ ಡಾ.ಎಂ.ಮೋಹನ್ ಆಳ್ವ ಸಂಚಾಲಕರಾಗಿ, ಎಂ.ಎಸ್.ಶೆಟ್ಟಿ ಸರಪಾಡಿ ಅಧ್ಯಕ್ಷರಾಗಿ, ಜಗನ್ನಾಥ ಚೌಟ ಬದಿಗುಡ್ಡೆ ಮಾಣಿ ಕಾರ್ಯಾಧ್ಯಕ್ಷರಾಗಿ ಇತರ ಪದಾಧಿಕಾರಿಗಳು, ಸದಸ್ಯರ ತಂಡ ಜೀರ್ಣೋದ್ಧಾರ ಕಾರ್ಯದ ಯಶಸ್ಸಿನಲ್ಲಿ ಶ್ರಮಿಸುತ್ತಿದೆ.
ಒಂದೆಡೆ ಶಿಲಾಮಯ ದೇವಾಲಯ ನಿರ್ಮಾಣಕ್ಕಾಗಿ ಕಲ್ಲಿನ ಕೆಲಸಗಳು, ದಾರುಶಿಲ್ಪದ ಕೆಲಸಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರತಿನಿತ್ಯವೂ ನೂರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಶ್ರಮದಾನ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಕೆಲಸಗಳಿಗೆ ಭಕ್ತರ ಶ್ರಮದಾನ ಸಹಕಾರ ಲಭಿಸಿದ ಪರಿಣಾಮ ಜೀರ್ಣೋದ್ಧಾರ ಕಾರ್ಯಗಳು ಸರಾಗವಾಗಿ ನಡೆದುಕೊಂಡು ಹೋಗುವುದಕ್ಕೆ ಸಹಕಾರಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು