8:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ: ಆನ್ ಲೈನ್ ನೋಂದಣಿ ಆರಂಭ

06/10/2023, 21:26

ಮಂಗಳೂರು(reporterkarnataka.com): ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬ ಗಳಾಗಿದ್ದು , 1939ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್
ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, 2023 ನವೆಂಬರ್ 4 ಮತ್ತು 5ರಂದು ಎರಡು ದಿನ, ನಗರದ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.


ದೇಶದ ವಿವಿಧ ಭಾಗಗಳಿಂದ ಸುಮಾರು 800 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ವಿನಾಯತಿ ನೀಡಲಾಗಿದೆ. ಪ್ರತಿನಿಧಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದ್ದು ಒನ್ಲೈನ್ ಮೂ ಲಕ ನೋಂದಣಿ ಆರಂಭಿಸಲಾಗಿದೆ ಎಂದು 25 ನೇ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಂಕಣಿ ಕವಿ, ಚಿಂತಕ, ರಾಹುಲ್ ಎಡ್ವಟೈಸರ್ಸ್ ಮಾಲಕ ಟೈಟಸ್ ನೊರೊನ್ಹಾ ಮಾಹಿತಿ ನೀಡಿದರು .
25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ
ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ಸಂಸ್ಥೆಯ ಸಂಚಾಲಕ ಖ್ಯಾತ ಕಲಾವಿದ ಪಿಂಟೊ ವಾಮಂಜೂರ್ ಸಮ್ಮೇ ಳನದ ಲಾಂಛನವನ್ನು ತಯಾರಿಸಿದ್ದಾರೆ. ಹಿರಿಯ ಪತ್ರಕರ್ತರಾದ , 1974ರಲ್ಲಿ ಕರ್ನಾಟಕದಲ್ಲಿ ಕೊಂಕಣಿ ಭಾಷಾ ಮಂಡಳದ ಸ್ಥಾಪನೆಗಾಗಿ ಶ್ರಮಿಸಿದ ವಿಮಲಾ ವಿ. ಪೈ ಜೀವನ ಸಿದ್ದಿ ಪ್ರಶಸ್ತಿ ಪುರಸ್ಕೃತ, ರಾಕ್ಣೊ ಪತ್ರಿಕೆಯ ವಿಶ್ರಾಂತ ಸಂಪಾದಕ ಫಾ | ಮಾ ರ್ಕ್ ವಾಲ್ಡರ್ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದರು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮಾಹಿತಿ ಪುಸ್ತಕ ಬಿಡುಗಡೆ ಮಾಡಿದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಗೋಕುಲದಾಸ ಪ್ರಭು ನೋಂದಣಿ ಪುಸ್ತಕ ಬಿಡುಗಡೆ ಮಾಡಿದರು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ನೊ ) ಅಧ್ಯಕ್ಷ ಆಲ್ವಿನ್ ಡಿಸೋಜಾ,ಪಾನೀರ್ ಕ್ಯೂ ಆರ್ ಕೋಡ್
ಮೂಲಕ ಒನ್ಲೈನ್ ನೋಂದಣಿಗೆ ವಿಧ್ಯುಕ್ತ ಚಾಲನೆ ನೀಡಿದರು . ಅಖಿಲ ಭಾರತ ಕೊಂಕಣಿ ಪರಿಷತ್ ಅಧ್ಯಕ್ಷ ಅರುಣ್ ಉಭಯ್ಕರ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .
ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಪತ್ರಕರ್ತ ಎಚ್. ಎಂ . ಪೆರ್ನಾ ಲ್ ಸ್ವಾಗತಿಸಿ ಅತಿಥಿಗಳ ಪರಿಚಯ ಮಾಡಿದರು . ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊ ಡ್ರಿಗಸ್
ಕಾರ್ಯಕ್ರಮ ನಿರೂಪಿಸಿದರು . ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾ ರಿ ಗುರುದತ್ತ ಬಂಟ್ವಾಳ್ಕರ್ ವಂದಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು