5:54 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 15ರಂದು ನವದುರ್ಗೆ, ಶಾರದೆ ಪ್ರತಿಷ್ಢಾಪನೆ

07/10/2023, 15:20

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವ ಇದೇ 15ರಂದು ಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯ ಪ್ರತಿಷ್ಠಾಪನೆಗೊಳಿಸುವ ಮೂಲಕ ಪ್ರಾರಂಭವಾಗಲಿದೆ.

ದಸರಾ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ಕೂಡ ಮಂಗಳೂರು ದಸರಾ ಕ್ಷೇತ್ರದ ರೂವಾರಿ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ಮಾತನಾಡಿ, ದಸರಾ ಮಹೋತ್ಸವವು ಅ.25 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅ. 24ರಂದು 4 ಗಂಟೆಗೆ ಮಂಗಳೂರು ದಸರಾ ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜ ರಸ್ತೆಯಲ್ಲಿ ಸಾಗಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ. ಅ.15 ರಿಂದ ಅ. 23ರವರಿಗೆ ಪ್ರತಿದಿನ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಸ್ತಬ್ದಚಿತ್ರಗಳು ಭಾಗವಹಿಸಲಿದ್ದು, ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ. ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲೀಕರು ತಮ್ಮ ಕಟ್ಟಡಗಳನ್ನು ವಿದ್ದುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಹರಿಕೃಷ್ಣ ಬಂಟ್ವಾಳ್, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನುಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು