10:05 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಿಕ್ಕಿಂ ಪ್ರವಾಹ: ಸಾವಿನ ಸಂಖ್ಯೆ 26ಕ್ಕೇರಿಕೆ; 142 ಮಂದಿ ನಾಪತ್ತೆ; 12 ಸಾವಿರಕ್ಕೂ ಜನರು ಬೀದಿಪಾಲು

07/10/2023, 18:40

ಗ್ಯಾಂಗ್ಟಾಕ್(reporterkarnataka.com): ಸಿಕ್ಕಿಂನಲ್ಲಿ ಮೇಘಸ್ಫೋಟದಿಂದ ಹಠಾತ್ತನೆ ಉಂಟಾದ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 26ಕ್ಕೇರಿದೆ. 142 ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 12 ಸಾವಿರ ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಭೀಕರ ಪ್ರವಾಹದಲ್ಲಿ ಈಗಾಗಲೇ 7 ಮಂದಿ ಸೇನಾ ಸಿಬ್ಬಂದಿ ಸೇರಿದಂತೆ ಸಂಖ್ಯೆ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸುಮಾರು 142 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಪತ್ತೆ ಕಾರ್ಯ ನಡೆಯುತ್ತಿದೆ. ಪ್ರವಾಹದಿಂದ ಸುಮಾರು 12 ಸಾವಿರಕ್ಕೂ ಹೆಚ್ಚು ಜನರು ಮನೆ ಮಠ ಕಳೆದುಕೊಂಡಿದ್ದಾರೆ. 13 ಸೇತುವೆಗಳು ಕೊಚ್ಚಿಕ ಹೋಗಿವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು