10:37 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ: ಯಶಸ್ವಿಗೊಳಿಸಲು ಜಂಬಯ್ಯ ನಾಯಕ ಕರೆ

07/10/2023, 18:43

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಬೆಂಗಳೂರಿನ ಪ್ರೀಡ್ಂ ಪಾರ್ಕನಲ್ಲಿ ಅ.11ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲ್ಲೂಕಿನ ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಮೊರಾರ್ಜಿ, ಡಾ. ಬಿ.ಆರ್.ಅಂಬೇಡ್ಕರ್, ಅಲ್ಪಸಂಖ್ಯಾತ ಇಲಾಖೆಗಳ. ಹಾಗೂ ಮುಂತಾದ ವಸತಿ ಶಾಲೆಗಳ ಮತ್ತು ವಸತಿ ನಿಲಯಗಳ ಹೊರಗುತ್ತಿಗೆ ನೌಕರರು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು, ಹೋರಾಟಗಾರರಾದ ಜಂಬಯ್ಯನಾಯಕ ಕರೆ ನೀಡಿದರು.
ಅವರು ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ, ಅ5ರಂದು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಹೊರಗುತ್ತಿಗೆ ನೌಕರರ ಪ್ರಮುಖ ಬೇಡಿಕೆಗಳನ್ನು, ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟಿಸಲಾಗುತ್ತಿದೆ. ಸಂಘದ ರಾಜ್ಯ ಸಮಿತಿಯಿಂದ ಅ.11 ಬುಧವಾರದಂದು, ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ, ಸಂಘಟನೆಯ ನೇತೃತ್ವದಲ್ಲಿ “ಹಾಸ್ಟೆಲ್ ನೌಕರರ ಮುಷ್ಕರ” ಹಮ್ಮಿಕೊಂಡಿದ್ದು, ಪ್ರತಿಭಟನೆಯಲ್ಲಿ ತಾಲೂಕಿನ ಸಂಘದ ಎಲ್ಲಾ ಸದಸ್ಯರು ತಪ್ಪದೇ ಭಾಗವಹಿಸಬೇಕಿದೆ. ಮತ್ತು ಇತರೆ ಸದಸ್ಯರನ್ನು ಕರೆತರುವ ಮೂಲಕ ಪ್ರತಿಭಟನೆಯನ್ನು, ಯಶಸ್ವಿ ಗೊಳಿಸಬೇಕಾಗಿ ಹಿರಿಯ ಮುಖಂಡರಾದ ಎಂ.ಜಂಬಯ್ಯನಾಯಕ ಕರೆ ನೀಡಿದರು.
ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಅನೇಕ ಪ್ರಮುಖ ಬೇಡಿಕೆಗಳನ್ನು, ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಸಭೆಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ರಮೇಶ್ ಕುಮಾರ್ ಮಾತನಾಡಿ, ಈ ವರೆಗೆ ಸಂಘದ ಸದಸ್ಯತ್ವ ಪಡೆಯದೇ ಇರುವವರು. ಅಗತ್ಯ ದಾಖಲುಗಳಾದ ಸದಸ್ಯತ್ವ ಶುಲ್ಕ 750 ರೂ. ನಗದು ಹಣ, ಆಧಾರ್ ಕಾರ್ಡ ಜೆರಾಕ್ಸ್, ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್, 2 ಪಾಸ್ಪರ್ಟ್ವ್ ಸೈಜ್ ಫೋಟೋಗಳೊಂದಿಗೆ ಹಾಜರಾಗಿದ್ದು. ಸಂಘದ ಸದಸ್ಯತ್ವ ನೊಂದಣಿ ಮಾಡಿಸಬಹುದಾಗಿದೆ ಎಂದರು. ಪಟ್ಟಣ ಸೇರಿದಂತೆ ತಾಲೂಕಿನ ವಿವಿದೆಡೆಯ, ಅನೇಕ ಹಾಸ್ಟೆಲ್ ಗಳ ಹೊರಗುತ್ತಿಗೆ ನೌಕರರು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು