2:46 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಅ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ: ಯಶಸ್ವಿಗೊಳಿಸಲು ಜಂಬಯ್ಯ ನಾಯಕ ಕರೆ

07/10/2023, 18:43

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಬೆಂಗಳೂರಿನ ಪ್ರೀಡ್ಂ ಪಾರ್ಕನಲ್ಲಿ ಅ.11ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲ್ಲೂಕಿನ ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಮೊರಾರ್ಜಿ, ಡಾ. ಬಿ.ಆರ್.ಅಂಬೇಡ್ಕರ್, ಅಲ್ಪಸಂಖ್ಯಾತ ಇಲಾಖೆಗಳ. ಹಾಗೂ ಮುಂತಾದ ವಸತಿ ಶಾಲೆಗಳ ಮತ್ತು ವಸತಿ ನಿಲಯಗಳ ಹೊರಗುತ್ತಿಗೆ ನೌಕರರು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು, ಹೋರಾಟಗಾರರಾದ ಜಂಬಯ್ಯನಾಯಕ ಕರೆ ನೀಡಿದರು.
ಅವರು ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ, ಅ5ರಂದು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಹೊರಗುತ್ತಿಗೆ ನೌಕರರ ಪ್ರಮುಖ ಬೇಡಿಕೆಗಳನ್ನು, ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟಿಸಲಾಗುತ್ತಿದೆ. ಸಂಘದ ರಾಜ್ಯ ಸಮಿತಿಯಿಂದ ಅ.11 ಬುಧವಾರದಂದು, ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ, ಸಂಘಟನೆಯ ನೇತೃತ್ವದಲ್ಲಿ “ಹಾಸ್ಟೆಲ್ ನೌಕರರ ಮುಷ್ಕರ” ಹಮ್ಮಿಕೊಂಡಿದ್ದು, ಪ್ರತಿಭಟನೆಯಲ್ಲಿ ತಾಲೂಕಿನ ಸಂಘದ ಎಲ್ಲಾ ಸದಸ್ಯರು ತಪ್ಪದೇ ಭಾಗವಹಿಸಬೇಕಿದೆ. ಮತ್ತು ಇತರೆ ಸದಸ್ಯರನ್ನು ಕರೆತರುವ ಮೂಲಕ ಪ್ರತಿಭಟನೆಯನ್ನು, ಯಶಸ್ವಿ ಗೊಳಿಸಬೇಕಾಗಿ ಹಿರಿಯ ಮುಖಂಡರಾದ ಎಂ.ಜಂಬಯ್ಯನಾಯಕ ಕರೆ ನೀಡಿದರು.
ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಅನೇಕ ಪ್ರಮುಖ ಬೇಡಿಕೆಗಳನ್ನು, ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಸಭೆಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ರಮೇಶ್ ಕುಮಾರ್ ಮಾತನಾಡಿ, ಈ ವರೆಗೆ ಸಂಘದ ಸದಸ್ಯತ್ವ ಪಡೆಯದೇ ಇರುವವರು. ಅಗತ್ಯ ದಾಖಲುಗಳಾದ ಸದಸ್ಯತ್ವ ಶುಲ್ಕ 750 ರೂ. ನಗದು ಹಣ, ಆಧಾರ್ ಕಾರ್ಡ ಜೆರಾಕ್ಸ್, ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್, 2 ಪಾಸ್ಪರ್ಟ್ವ್ ಸೈಜ್ ಫೋಟೋಗಳೊಂದಿಗೆ ಹಾಜರಾಗಿದ್ದು. ಸಂಘದ ಸದಸ್ಯತ್ವ ನೊಂದಣಿ ಮಾಡಿಸಬಹುದಾಗಿದೆ ಎಂದರು. ಪಟ್ಟಣ ಸೇರಿದಂತೆ ತಾಲೂಕಿನ ವಿವಿದೆಡೆಯ, ಅನೇಕ ಹಾಸ್ಟೆಲ್ ಗಳ ಹೊರಗುತ್ತಿಗೆ ನೌಕರರು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು