11:31 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

9ರಿಂದ 6 ದಿನಗಳ ಕಾಲ ದ.ಕ. ಜಿಲ್ಲೆಯಾದ್ಯಂತ ಪರಿಣಾಮಕಾರಿ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಾರಂಭ

08/10/2023, 11:48

ಮಂಗಳೂರು(reporterkarnataka.com): ಪರಿಣಾಮಕಾರಿ ಇಂದ್ರಧನುಷ್ ಕಾರ್ಯಕ್ರಮವು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮುಂದುವರಿದ ಭಾಗವಾಗಿದ್ದು, ಅಗತ್ಯವಿರುವ ರೋಗನಿರೋಧಕ ಲಸಿಕೆಯಿಂದ ಭಾಗಶಃ ಪೂರ್ಣ ಪ್ರಮಾಣದಲ್ಲಿ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಪೂರ್ಣ ಪ್ರಮಾಣದ ಲಸಿಕೆಯನ್ನು ನೀಡಲಾಗುವುದು ಎಂದು ಆರ್.ಸಿ.ಎಚ್. ಅಧಿಕಾರಿ ಡಾ.ರಾಜೇಶ್ ಹೇಳಿದರು.
ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದರು.
ಮೂರನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮಕ್ಕಾಗಿ ಮನೆ-ಮನೆ ಸಮೀಕ್ಷೆ ನಡೆಸಿ ಫಲಾನುಭವಿಗಳ ಪಟ್ಟಿ ಮಾಡಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ. ನಿರ್ಧಿಷ್ಟವಾಗಿ ಕ್ರಿಯಾ ಯೋಜನೆಯಲ್ಲಿ ಗುರುತಿಸಿದ ಸ್ಥಳದಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುವುದು. ಅಕ್ಟೋಬರ್ ತಿಂಗಳಲ್ಲಿ 6 ದಿನ ಶಿಬಿರ ನಡೆಯಲಿದೆ. ಅ. 9ರಿಂದ 14ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮೂರನೇ ಸುತ್ತಿನಲ್ಲಿ ಆಯೋಜಿಸಲಾಗಿರುವ ಲಸಿಕಾ ಶಿಬಿರಗಳು ಒಟ್ಟು 441, ಲಸಿಕೆಯಿಂದ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಒಟ್ಟು 583, 5 ವರ್ಷದ ಒಳಗಿನ ಒಟ್ಟು ಮಕ್ಕಳು 3,076 ಎಂದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಂಸ್ಥೆ, ನಗರ ಅಭಿವೃದ್ಧಿ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇತರ ಸಂಘ-ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಜಿಲ್ಲಾ ಶೂಶ್ರಣಾಧಿಕಾರಿ ಲೀಸ್ಸಿ ಮತ್ತು ತಾಲೂಕು ಆರೋಗ್ಯಧಿಕಾರಿ ಡಾ. ಸುಜಯ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು