5:12 AM Monday28 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

9ರಿಂದ 6 ದಿನಗಳ ಕಾಲ ದ.ಕ. ಜಿಲ್ಲೆಯಾದ್ಯಂತ ಪರಿಣಾಮಕಾರಿ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಾರಂಭ

08/10/2023, 11:48

ಮಂಗಳೂರು(reporterkarnataka.com): ಪರಿಣಾಮಕಾರಿ ಇಂದ್ರಧನುಷ್ ಕಾರ್ಯಕ್ರಮವು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮುಂದುವರಿದ ಭಾಗವಾಗಿದ್ದು, ಅಗತ್ಯವಿರುವ ರೋಗನಿರೋಧಕ ಲಸಿಕೆಯಿಂದ ಭಾಗಶಃ ಪೂರ್ಣ ಪ್ರಮಾಣದಲ್ಲಿ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಪೂರ್ಣ ಪ್ರಮಾಣದ ಲಸಿಕೆಯನ್ನು ನೀಡಲಾಗುವುದು ಎಂದು ಆರ್.ಸಿ.ಎಚ್. ಅಧಿಕಾರಿ ಡಾ.ರಾಜೇಶ್ ಹೇಳಿದರು.
ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದರು.
ಮೂರನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮಕ್ಕಾಗಿ ಮನೆ-ಮನೆ ಸಮೀಕ್ಷೆ ನಡೆಸಿ ಫಲಾನುಭವಿಗಳ ಪಟ್ಟಿ ಮಾಡಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ. ನಿರ್ಧಿಷ್ಟವಾಗಿ ಕ್ರಿಯಾ ಯೋಜನೆಯಲ್ಲಿ ಗುರುತಿಸಿದ ಸ್ಥಳದಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುವುದು. ಅಕ್ಟೋಬರ್ ತಿಂಗಳಲ್ಲಿ 6 ದಿನ ಶಿಬಿರ ನಡೆಯಲಿದೆ. ಅ. 9ರಿಂದ 14ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮೂರನೇ ಸುತ್ತಿನಲ್ಲಿ ಆಯೋಜಿಸಲಾಗಿರುವ ಲಸಿಕಾ ಶಿಬಿರಗಳು ಒಟ್ಟು 441, ಲಸಿಕೆಯಿಂದ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಒಟ್ಟು 583, 5 ವರ್ಷದ ಒಳಗಿನ ಒಟ್ಟು ಮಕ್ಕಳು 3,076 ಎಂದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಂಸ್ಥೆ, ನಗರ ಅಭಿವೃದ್ಧಿ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇತರ ಸಂಘ-ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಜಿಲ್ಲಾ ಶೂಶ್ರಣಾಧಿಕಾರಿ ಲೀಸ್ಸಿ ಮತ್ತು ತಾಲೂಕು ಆರೋಗ್ಯಧಿಕಾರಿ ಡಾ. ಸುಜಯ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು