8:05 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ ನಿಧನ: 4 ದಶಕಗಳ ಕಲಾ ಸೇವೆಗೆ ಮಂಗಳ

08/10/2023, 19:09

ಕಾರವಾರ(reporterkarnataka.com): ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು. ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆ ಗೈದಿದ್ದರು. ದಾಕ್ಷಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ,,ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕರಗಳಿಗೆ ಭಾಜನರಾಗಿದ್ದರು. ಅವರು ಪತ್ನಿ,ಪುತ್ರನನ್ನು ಅಗಲಿದ್ದಾರೆ.ಅವರ ನಿಧಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು