12:32 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜಂಗಮರೆಂದರೆ ಯಾರು?

08/10/2023, 20:32

ಜಂಗಮರೆಂದರೆ ಯಾರು? ಯಾರು??
ಯಾರು? ಯಾರು?? ಜಂಗಮರೆಂದರೆ!! ಪ!!
ಎಲ್ಲವನ ಕೊಟ್ಟು ಇಹದೆಲ್ಲವನ ಬಿಟ್ಟು
ಬಲ್ಲಿದನ ಜೋಳಿಗೆಯ ಕರದಲಿ ಪಿಡಿದು
ಕಲ್ಲು ಮನಸುಗಳ ಹೂವಾಗಿಸುವದೆಡೆಗೆ
ಮಲ್ಲಿನಾಥನ ಮಗನಾಗಿ ಯೋಗಿಯಾದವರೆ!! ಜಂಗಮ!!

ಬಣ್ಣ ಬಣ್ಣಗಳ ಕನಸುಗಳನೆಲ್ಲ ತೊರೆದು
ಬಿನ್ನಹದಿಂದಲೆ ಜೀವನದ ಸಾರವ ಸಾರೊ
ಕಣ್ಣು ಕಣ್ಣುಗಳ ತೆರೆಸೊ ಜ್ಞಾನ ಭಂಡಾರವು
ಹುಣ್ಣುಮೆಯ ತಂಪನೇ ಚೆಲ್ಲೊ ಕಾಂತಿಯೆ!! ಜಂಗಮ!!

ಬದುಕಿನ ತಿರುಳನ್ನು ವಚನದಲಿ ಸಾರುತ್ತ
ಹೃದಯಗಳಲಿ ಅಮೃತವನೆ ಧಾರೆಯೆರೆವ
ಹದಿಬದೆಯ ಧರ್ಮದ ತಿರುಳನೆ ಬಿತ್ತುವ
ವಿಧಿತದಲಿ ಸರ್ವರಾ ಬಾಳನೆ ಬೆಳಗುವವರೆ!! ಜಂಗಮ!!

ಕಾಮ ಕ್ರೋಧ ಲೋಭ ಮೋಹ ಮತ್ಸರವ
ಯಾಮದಿಂದಲೆ ತೊರೆದು ಸಾಧುವಾಗಿಹ
ಸೋಮ ಸೂರ್ಯರಂತೆಯೆ ಜಗ ಕಾಯುವ
ನಾಮ ನಿರ್ದೇಶಿತ ಕಾವಿಯ ಕಾರ್ಮಿಕರೆ!! ಜಂಗಮ!!

– ಅನಿತಾ ಸಾಲಿಮಠ ಅಂತರಗಂಗೆ
(ವಿದ್ಯಾ ಚೇತನ ಪದವಿ ಪೂರ್ವ ಕಾಲೇಜು ಲಿಂಗಸೂರ್)

ಇತ್ತೀಚಿನ ಸುದ್ದಿ

ಜಾಹೀರಾತು