7:38 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಜಂಗಮರೆಂದರೆ ಯಾರು?

08/10/2023, 20:32

ಜಂಗಮರೆಂದರೆ ಯಾರು? ಯಾರು??
ಯಾರು? ಯಾರು?? ಜಂಗಮರೆಂದರೆ!! ಪ!!
ಎಲ್ಲವನ ಕೊಟ್ಟು ಇಹದೆಲ್ಲವನ ಬಿಟ್ಟು
ಬಲ್ಲಿದನ ಜೋಳಿಗೆಯ ಕರದಲಿ ಪಿಡಿದು
ಕಲ್ಲು ಮನಸುಗಳ ಹೂವಾಗಿಸುವದೆಡೆಗೆ
ಮಲ್ಲಿನಾಥನ ಮಗನಾಗಿ ಯೋಗಿಯಾದವರೆ!! ಜಂಗಮ!!

ಬಣ್ಣ ಬಣ್ಣಗಳ ಕನಸುಗಳನೆಲ್ಲ ತೊರೆದು
ಬಿನ್ನಹದಿಂದಲೆ ಜೀವನದ ಸಾರವ ಸಾರೊ
ಕಣ್ಣು ಕಣ್ಣುಗಳ ತೆರೆಸೊ ಜ್ಞಾನ ಭಂಡಾರವು
ಹುಣ್ಣುಮೆಯ ತಂಪನೇ ಚೆಲ್ಲೊ ಕಾಂತಿಯೆ!! ಜಂಗಮ!!

ಬದುಕಿನ ತಿರುಳನ್ನು ವಚನದಲಿ ಸಾರುತ್ತ
ಹೃದಯಗಳಲಿ ಅಮೃತವನೆ ಧಾರೆಯೆರೆವ
ಹದಿಬದೆಯ ಧರ್ಮದ ತಿರುಳನೆ ಬಿತ್ತುವ
ವಿಧಿತದಲಿ ಸರ್ವರಾ ಬಾಳನೆ ಬೆಳಗುವವರೆ!! ಜಂಗಮ!!

ಕಾಮ ಕ್ರೋಧ ಲೋಭ ಮೋಹ ಮತ್ಸರವ
ಯಾಮದಿಂದಲೆ ತೊರೆದು ಸಾಧುವಾಗಿಹ
ಸೋಮ ಸೂರ್ಯರಂತೆಯೆ ಜಗ ಕಾಯುವ
ನಾಮ ನಿರ್ದೇಶಿತ ಕಾವಿಯ ಕಾರ್ಮಿಕರೆ!! ಜಂಗಮ!!

– ಅನಿತಾ ಸಾಲಿಮಠ ಅಂತರಗಂಗೆ
(ವಿದ್ಯಾ ಚೇತನ ಪದವಿ ಪೂರ್ವ ಕಾಲೇಜು ಲಿಂಗಸೂರ್)

ಇತ್ತೀಚಿನ ಸುದ್ದಿ

ಜಾಹೀರಾತು