11:37 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಸುರತ್ಕಲ್: ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ಸಾಮೂಹಿಕ ವಲಸೆ; ಇನಾಯತ್ ಅಲಿ ನೇತೃತ್ವದಲ್ಲಿ ಸೇರ್ಪಡೆ

08/10/2023, 20:46

ಸುರತ್ಕಲ್(reporterkarnataka.com): ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬ್ಲಾಕ್ ವ್ಯಾಪ್ತಿಯ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಜೆಡಿಎಸ್ ಸುರತ್ಕಲ್ ಬ್ಲಾಕ್ ಅಧ್ಯಕ್ಷ ನವಾಝ್ ಕಾಟಿಪಳ್ಳ, ಸೇವಾಂಜಲಿ ಟ್ರಸ್ಟ್‌ ಅಧ್ಯಕ್ಷೆ ರೇಷ್ಮಾ ಡಿಸೋಜ, ಸಾಮಾಜಿಕ ಕಾರ್ಯಕರ್ತೆ ಶಾಂತಿ ಡಿಸೋಜ, ಜೆಡಿಎಸ್ ಬ್ಲಾಕ್ ಪದಾಧಿಕಾರಿಗಳಾದ ಕಾಟಿಪಳ್ಳ ವಾರ್ಡ್‌ನ ಉಬೇದ್ ಹುಸೇನ್, ಎಂ.ಡಿ. ಖಾದರ್, ಅಬ್ದುಲ್ ರಹ್ಮಾನ್, ಜಂಶೀದ್, ಅಫ್ನಾನ್, ಹಸನಬ್ಬ ಹಾಗೂ ಇತರ ಪದಾಧಿಕಾರಿಗಳು ಇನಾಯತ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಗುಲ್ಝಾರ್ ಬಾನು, ಕಾರ್ಪೋರೇಟರ್ ಅನಿಲ್ ಕುಮಾರ್, ಮುಖಂಡರಾದ ಉಮೇಶ್ ದಂಡಕೇರಿ, ಶಶಿಕಲಾ ಪದ್ಮನಾಭ, ಸಮೀರ್ ಕಾಟಿಪಳ್ಳ, ಮಲ್ಲಿಕಾರ್ಜುನ, ರಾಜೇಶ್ ಕುಳಾಯಿ, ರೆಹಮಾನ್ ಕುಂಜತ್ತಬೈಲ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು